ಬ್ರೇಕಿಂಗ್ ನ್ಯೂಸ್
11-05-22 03:11 pm HK Desk News ದೇಶ - ವಿದೇಶ
ಶ್ರೀಕಾಕುಳಂ, ಮೇ 11 : ಬಂಗಾಳ ಕೊಲ್ಲಿಯಲ್ಲಿ ಅಸಾನಿ ಚಂಡಮಾರುತ ಕಾರಣ ಕರಾವಳಿಯಲ್ಲಿ ಸಮುದ್ರ ಭೋರ್ಗರೆಯುತ್ತಾ ತೀರಕ್ಕೆ ಅಪ್ಪಳಿಸತೊಡಗಿದೆ. ಈ ನಡುವೆ, ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕರಾವಳಿ ತೀರದಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಚಿನ್ನದ ಮಾದರಿಯ ರಥವೊಂದು ಸಮುದ್ರದಲ್ಲಿ ತೇಲಿಬಂದಿದ್ದು ಜನರಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಎಂಬಲ್ಲಿನ ಕರಾವಳಿ ತೀರದಲ್ಲಿ ಚಿನ್ನದ ರಥ ಮಂಗಳವಾರ ಬೆಳಗ್ಗೆ ತೇಲಿ ಬಂದಿದೆ. ಸ್ಥಳೀಯರು ಸಮುದ್ರದಲ್ಲಿ ಏನೋ ರಥದ ರೀತಿ ಕಂಡುಬಂದಿದ್ದನ್ನು ನೋಡಿ ಅಚ್ಚರಿಗೊಂಡಿದ್ದು ನೀರಿಗೆ ಹಾರಿ ದಡಕ್ಕೆ ಎಳೆದು ತಂದಿದ್ದಾರೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪೊಲೀಸರು ಚಿನ್ನದ ಮಾದರಿಯ ರಥವೂ ಬೇರೆ ದೇಶದಿಂದ ಬಂದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ರಥ ದೇವಸ್ಥಾನದ ಮಾದರಿಯಲ್ಲಿದ್ದು ಚಿನ್ನದ ಬಣ್ಣದಲ್ಲಿ ಕಂಗೊಳಿಸುತ್ತಿದೆ. ಪೂರ್ತಿ ಚಿನ್ನದ್ದೇಯಾ ಅಥವಾ ಕೋಟಿಂಗ್ ಇದೆಯಾ ಅನ್ನೋದ್ರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಗುಪ್ತಚರ ಇಲಾಖೆಯ ಅಧಿಕಾರಿಗಳು ಕೂಡ ಪರಿಶೀಲನೆಗೆ ಮುಂದಾಗಿದ್ದಾರೆ. ರಥದ ಮೇಲೆ 16/1/2022 ಎಂಬ ದಿನಾಂಕ ನಮೂದಿಸಲಾಗಿದೆ. ವಿದೇಶಿ ಬರವಣಿಗೆ ಇದೆ. ಬಹುಶಃ ರಥವೂ ಮಲೇಶಿಯಾ, ಥಾಯ್ಲೆಂಡ್ ಅಥವಾ ಜಪಾನ್ನಿಂದ ಬಂದಿರಬಹುದೆಂದು ಶಂಕಿಸಲಾಗಿದೆ. ಚಿನ್ನದ ರಥ ಕರಾವಳಿ ತೀರಕ್ಕೆ ತೇಲಿ ಬಂದಿರುವುದನ್ನು ತಿಳಿದು ದೂರದ ಪ್ರದೇಶಗಳಿಂದ ಜನರ ಕುತೂಹಲದಿಂದ ಆಗಮಿಸುತ್ತಿದ್ದಾರೆ.
ಇತ್ತೀಚಿನ ಚಂಡಮಾರುತದ ಸಂದರ್ಭದಲ್ಲಿ ಪೂರ್ವ ಗೋದಾವರಿ ಜಿಲ್ಲೆಯ ಕರಾವಳಿಯಲ್ಲೂ ಚಿನ್ನದ ನಾಣ್ಯಗಳು ಪತ್ತೆಯಾಗಿದ್ದವು. ಇದೀಗ ಸುನ್ನಪಲ್ಲಿ ಬಂದರಿಗೆ ಚಿನ್ನದ ರಥ ಬಂದಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಥದ ಮೂಲವನ್ನು ಹುಡುಕುತ್ತಿದ್ದಾರೆ.
#WATCH | Andhra Pradesh: A mysterious gold-coloured chariot washed ashore at Sunnapalli Sea Harbour in Srikakulam y'day, as the sea remained turbulent due to #CycloneAsani
— ANI (@ANI) May 11, 2022
SI Naupada says, "It might've come from another country. We've informed Intelligence & higher officials." pic.twitter.com/XunW5cNy6O
Residents dragged out a mysterious gold-coloured chariot that washed ashore at the Sunnapalli Sea Harbour in Andhra Pradesh’s Srikakulam amid turbulence due to Cyclone Asani on Tuesday. The sub-inspector (SI) of Naupada in the Srikakulam district said, "It might have come from another country. We have informed the intelligence and higher officials.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm