ಬ್ರೇಕಿಂಗ್ ನ್ಯೂಸ್
14-05-22 07:24 pm HK Desk News ದೇಶ - ವಿದೇಶ
ಲಕ್ನೋ, ಮೇ 14 : ವಿಶ್ವವಿಖ್ಯಾತ ತಾಜಮಹಲ್ ಹಿಂದೆ ಶಿವನ ದೇವಸ್ಥಾನ ಆಗಿತ್ತು, ಅದರ ಹೆಸರು ತೇಜೋ ಮಹಾಲಯ ಎಂಬುದಾಗಿತ್ತು ಎಂಬ ವಾದ ಕೇಳಿಬಂದಿರುವಾಗಲೇ ಅಲ್ಲಿನ ಮುಚ್ಚಿದ ಕೋಣೆಗಳ ಬಗ್ಗೆ ಊಹಾಪೋಹ ಎದ್ದಿತ್ತು. ಕೋಣೆಗಳನ್ನು ತೆರೆದು ಪರಿಶೀಲನೆಗೆ ಅವಕಾಶ ನೀಡಬೇಕೆಂದು ಕೋರ್ಟಿಗೂ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಪ್ರಾಚ್ಯವಸ್ತು ಇಲಾಖೆಯ ಅಧಿಕಾರಿಯೊಬ್ಬರು, ಅಲ್ಲಿನ ಮುಚ್ಚಿದ ಕೋಣೆಗಳಲ್ಲಿ ಹಿಂದು ವಿಗ್ರಹಗಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತ ಅರ್ಜಿಯನ್ನು ಅಲಹಾಬಾದ್ ಉಚ್ಚ ನ್ಯಾಯಾಲಯ ಇತ್ತೀಚೆಗಷ್ಟೇ ತಿರಸ್ಕರಿಸಿದ್ದು ಈ ರೀತಿಯ ಇತಿಹಾಸದ ಪ್ರಶ್ನೆಗಳಿಗೆ ಉತ್ತರ ಹುಡುಕಲು ಪಿಐಎಲ್ ಹಾಕುವುದು ಸರಿಯಾದ ಕ್ರಮವಲ್ಲ. ಅದರ ಬಗ್ಗೆ ಅಧ್ಯಯನ ಕೈಗೊಳ್ಳಿ ಎಂದು ಹೇಳಿತ್ತು. ಇದರ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ (ಎಎಸ್ಐ) ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ತಾಜ್ ಮಹಲ್ ಒಳಗಿನ ಮುಚ್ಚಿದ 22 ಕೋಣೆಗಳೊಳಗೆ ಹಿಂದೂ ದೇವರ ವಿಗ್ರಹಗಳಿಲ್ಲ. ಹಾಗೆಯೇ ಆ ಕೋಣೆಗಳನ್ನು ಶಾಶ್ವತವಾಗಿ ಮುಚ್ಚಿಯೂ ಇಲ್ಲ. ಕೆಲವೊಮ್ಮೆ ಕೋಣೆಗಳನ್ನು ತೆಗೆದು ಕಟ್ಟಡದ ಸಂರಕ್ಷಣೆಗೆ ಅಗತ್ಯ ಕಾರ್ಯಗಳನ್ನು ಕೈಗೊಂಡು ಬರಲಾಗಿದೆ ಎಂದು ಹೇಳಿದ್ದಾರೆ.

ತಾಜ್ ಮಹಲ್ ನೆಲಮಾಳಿಗೆಯಲ್ಲಿ ಒಟ್ಟು 100 ಸಾರ್ವಜನಿಕ ಕೋಣೆಗಳಿವೆ. ಇವುಗಳೆಲ್ಲ ವಿವಿಧ ವಿನ್ಯಾಸಗಳನ್ನು ಹೊಂದಿದ್ದು ಅವುಗಳನ್ನು ಭದ್ರತಾ ಕಾರಣಗಳಿಗಷ್ಟೆ ಮುಚ್ಚಲಾಗಿದೆ. ಜನರು ಹಾಳು ಮಾಡಬಾರದೆನ್ನುವುದೇ ಇದರ ಹಿಂದಿನ ಕಾಳಜಿ ಎಂದು ಅಧಿಕಾರಿ ಹೇಳಿದ್ದಾರೆ.
![]()
ಇಲಾಖೆಯ ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ.ಮೊಹಮ್ಮದ್ ಈ ಬಗ್ಗೆ ಪ್ರತಿಕ್ರಿಯಿಸಿ, ತಾನು ಅಲ್ಲಿ ಉಸ್ತುವಾರಿಯಾಗಿದ್ದಾಗ ಆ ಕೊಠಡಿಗಳಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಕಂಡಿಲ್ಲ ಎಂದಿದ್ದಾರೆ.
Archaeological Survey of India (ASI) officials have denied allegations by Hindu groups that the Taj Mahal was once a Hindu temple known as 'Tejo Mahalaya'. ASI officials said there were no idols in the 22 unopened rooms on the ground floor of the Taj Mahal. A person named Rajneesh Singh had filed a petition in the Allahabad High Court seeking the opening up of 22 permanently locked rooms in the Taj Mahal.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 08:11 pm
HK News Staffer
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm