ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.

ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm