ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.
ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm