ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.

ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm