ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.

ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm