ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.

ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm