ಬ್ರೇಕಿಂಗ್ ನ್ಯೂಸ್
30-09-20 11:13 am Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 30: ಲಾಕ್ಡೌನ್ ಕಾಲದಲ್ಲಿ ಬೀದಿಗೆ ಬಿದ್ದ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಬಾಲಿವುಡ್ ನಟ ಸೋನು ಸೂದ್ ಅವರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿದೆ.
ಕೊರೊನಾದಿಂದಾಗಿ ದೇಶದಲ್ಲಿ ಏಕಾಏಕಿ ಲಾಕ್ಡೌನ್ ಘೋಷಣೆಯಾಗಿದ್ದು ಬೀದಿಗೆ ಬಿದ್ದ ಲಕ್ಷಾಂತರ ಕಾರ್ಮಿಕರ ಪಾಲಿಗೆ ಸೋನು ಸೂದ್ ಆಪತ್ಬಾಂಧವನ ರೀತಿ ನೆರವಿಗೆ ಧಾವಿಸಿದರು. ತಮ್ಮದೇ ಗುಂಪು ಕಟ್ಟಿಕೊಂಡು ವಿವಿಧ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಕೂಲಿ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಅದೆಷ್ಟೋ ಮಂದಿಗೆ ರಸ್ತೆ ಬದಿಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು. ಸೋನು ಸೂದ್ ಸೇವಾ ಕಾರ್ಯ ದೇಶದ ವಲಸೆ ಕಾರ್ಮಿಕರಿಗೆ ಸೀಮಿತವಾಗಿರಲಿಲ್ಲ. ವಿದೇಶಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರ ಸಂಕಷ್ಟಕ್ಕೂ ಸೋನು ಸೂದ್ ಮನಸ್ಸು ಮಿಡಿದಿತ್ತು.

ಲಾಕ್ಡೌನ್ ಬಳಿಕ ನಿರಂತರವಾಗಿ ಸಹಾಯಗಳನ್ನು ಮಾಡುತ್ತಲೇ ಬರುತ್ತಿರುವ ನಟ ಸೋನು ಸೂದ್ ಮಾನವೀಯ ಕಾರ್ಯವನ್ನು ಗುರುತಿಸಿರುವ ವಿಶ್ವಸಂಸ್ಥೆ ಯುಎನ್ಡಿಪಿಯ ವಿಶೇಷ ಎಸ್ಡಿಜಿ (ವಿಶೇಷ ಮಾನವೀಯ ಕೆಲಸ) ಪ್ರಶಸ್ತಿ ನೀಡಿ ಗೌರವಿಸಿದೆ.
ಸೋಮವಾರ ಸಂಜೆ ನಡೆದ ವಿಶ್ವಸಂಸ್ಥೆಯ ಆನ್ಲೈನ್ ಸಮಾರಂಭದಲ್ಲಿ ಸೂದ್ಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಸೋನು ಸೂದ್, ಫಲಾಪೇಕ್ಷೆಗಳಿಲ್ಲದೆ ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಗೌರವಿಸಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm