ಬ್ರೇಕಿಂಗ್ ನ್ಯೂಸ್
23-07-22 09:33 pm Mangalore Correspondent ಸಿನಿಮಾ
ಮಂಗಳೂರು, ಜುಲೈ 23: ತುಳುನಾಡಿನ ದೈವಾರಾಧನೆಯ ಸೊಗಡನ್ನು ಬೆರಸಿಕೊಂಡು ನಿರ್ಮಿಸಿದ ವಿಭಿನ್ನ ಕಥಾಹಂದರದ 'ಜೀಟಿಗೆ’ ತುಳು ಸಿನೆಮಾ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಾಲಿನಲ್ಲಿ 'ಅತ್ಯುತ್ತಮ ಪ್ರಾದೇಶಿಕ ಚಿತ್ರ’ ಎಂಬ ಗೌರವಕ್ಕೆ ಪಾತ್ರವಾಗಿದೆ.
ತುಳು ಸಿನೆಮಾಕ್ಕೆ ಸಿಗುತ್ತಿರುವ ಏಳನೇ ರಾಷ್ಟ್ರೀಯ ಪ್ರಶಸ್ತಿ ಇದಾಗಿದೆ. ಇದಕ್ಕೂ ಮುನ್ನ “ಬಂಗಾರ್ ಪಟ್ಲೇರ್’, “ಕೋಟಿ ಚೆನ್ನಯ’, “ಗಗ್ಗರ’, “ಮದಿಪು’, “ಪಡ್ಡಾಯಿ’, “ಪಿಂಗಾರ’ ಸಿನೆಮಾಗಳು ರಾಷ್ಟ್ರೀಯ ಗೌರವಕ್ಕೆ ಪಾತ್ರವಾಗಿದ್ದವು.

ಸಂತೋಷ್ ಮಾಡ ನಿರ್ದೇಶನ ಹಾಗೂ ಅರುಣ್ ರೈ ತೋಡಾರ್ ನಿರ್ಮಾಣ, ನವೀನ್ ಡಿ. ಪಡೀಲ್ ಅವರ ಮುಖ್ಯ ತಾರಾಗಣದಲ್ಲಿ “ಜೀಟಿಗೆ’ ಸಿನಿಮಾ ಸಿದ್ಧವಾಗಿದೆ. ಸಂತೋಷ್ ಮಾಡ ಅವರ ಮೊದಲ ಸಿನೆಮಾ ನಿರ್ದೇಶನವೇ “ರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನವಾಗಿರುವುದು ವಿಶೇಷ. ಕೊರೊನಾ ಲಾಕ್ಡೌನ್ ಸಮಯದಲ್ಲಿ 15 ದಿನದಲ್ಲಿ ಶೂಟಿಂಗ್ ಕಂಡ “ಜೀಟಿಗೆ’ ಇನ್ನಷ್ಟೇ ತೆರೆ ಕಾಣಬೇಕಿದೆ.

ತುಳುನಾಡಿನ ದೈವಾರಾಧನೆ ಮತ್ತು ವಿಭಿನ್ನ ಕಟ್ಟುಪಾಡುಗಳನ್ನು ಬಿಂಬಿಸುವ ಕಲಾತ್ಮಕ ಚಿತ್ರ ಇದಾಗಿದೆ. ನವೀನ್ ಡಿ. ಪಡೀಲ್, ರೂಪಾ ವರ್ಕಾಡಿ, ಜೆ.ಪಿ. ತೂಮಿನಾಡ್, ಚೇತನ್ ರೈ ಮಾಣಿ, ಅರುಣ್ ರೈ ಸಹಿತ ಹಲವರು ತಾರಾಗಣದಲ್ಲಿದ್ದಾರೆ. ಚಿತ್ರಕಥೆ, ಸಂಭಾಷಣೆ ಶಶಿರಾಜ್ ಕಾವೂರು ಅವರದ್ದು. ಉನ್ನಿ ಮದವೂರ್ ಕೆಮರಾ, ಸ್ಯಾಕ್ಸೋಫೋನ್ ಜಯರಾಮ್ ಸಂಗೀತವಿದೆ.

ಒಂದು ಒಳ್ಳೆಯ ಸಿನೆಮಾ ಮಾಡಬೇಕು ಎಂಬುದಷ್ಟೇ ನಮ್ಮ ಉದ್ದೇಶವಾಗಿತ್ತು. ಅದನ್ನು ತುಂಬಾ ಶ್ರದ್ಧೆಯಿಂದ ಮಾಡಿದ್ದೇವೆ. ಈಗ ಅದನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ಈ ಚಿತ್ರದಲ್ಲಿ ದುಡಿದ ಎಲ್ಲರಿಗೆ, ನಮ್ಮ ಚಿತ್ರವನ್ನು ಗುರುತಿಸಿದ ಜ್ಯೂರಿಗಳಿಗೆ ಧನ್ಯವಾದ ಹೇಳಬಯಸುತ್ತೇನೆ ಎಂದು ಚಿತ್ರದ ನಿರ್ಮಾಪಕ ಅರುಣ ರೈ ತೋಡಾರು ಪ್ರತಿಕ್ರಿಯಿಸಿದ್ದಾರೆ.
The National Film Awards are the most prestigious awards for art and cinema in India. This year's National Film Awards, which were announced on July 22, saw actors and filmmakers taking home the award for the extraordinary work that they have done in Indian cinema. Among the long list of awards, the Tulu film Jeetige (Deevatige - traditional torch), which is helmed by Santhosh Mada won the Best Film Award in the Tulu film category.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm