ಬ್ರೇಕಿಂಗ್ ನ್ಯೂಸ್
23-07-22 09:33 pm Mangalore Correspondent ಸಿನಿಮಾ
ಮಂಗಳೂರು, ಜುಲೈ 23: ತುಳುನಾಡಿನ ದೈವಾರಾಧನೆಯ ಸೊಗಡನ್ನು ಬೆರಸಿಕೊಂಡು ನಿರ್ಮಿಸಿದ ವಿಭಿನ್ನ ಕಥಾಹಂದರದ 'ಜೀಟಿಗೆ’ ತುಳು ಸಿನೆಮಾ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಾಲಿನಲ್ಲಿ 'ಅತ್ಯುತ್ತಮ ಪ್ರಾದೇಶಿಕ ಚಿತ್ರ’ ಎಂಬ ಗೌರವಕ್ಕೆ ಪಾತ್ರವಾಗಿದೆ.
ತುಳು ಸಿನೆಮಾಕ್ಕೆ ಸಿಗುತ್ತಿರುವ ಏಳನೇ ರಾಷ್ಟ್ರೀಯ ಪ್ರಶಸ್ತಿ ಇದಾಗಿದೆ. ಇದಕ್ಕೂ ಮುನ್ನ “ಬಂಗಾರ್ ಪಟ್ಲೇರ್’, “ಕೋಟಿ ಚೆನ್ನಯ’, “ಗಗ್ಗರ’, “ಮದಿಪು’, “ಪಡ್ಡಾಯಿ’, “ಪಿಂಗಾರ’ ಸಿನೆಮಾಗಳು ರಾಷ್ಟ್ರೀಯ ಗೌರವಕ್ಕೆ ಪಾತ್ರವಾಗಿದ್ದವು.

ಸಂತೋಷ್ ಮಾಡ ನಿರ್ದೇಶನ ಹಾಗೂ ಅರುಣ್ ರೈ ತೋಡಾರ್ ನಿರ್ಮಾಣ, ನವೀನ್ ಡಿ. ಪಡೀಲ್ ಅವರ ಮುಖ್ಯ ತಾರಾಗಣದಲ್ಲಿ “ಜೀಟಿಗೆ’ ಸಿನಿಮಾ ಸಿದ್ಧವಾಗಿದೆ. ಸಂತೋಷ್ ಮಾಡ ಅವರ ಮೊದಲ ಸಿನೆಮಾ ನಿರ್ದೇಶನವೇ “ರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನವಾಗಿರುವುದು ವಿಶೇಷ. ಕೊರೊನಾ ಲಾಕ್ಡೌನ್ ಸಮಯದಲ್ಲಿ 15 ದಿನದಲ್ಲಿ ಶೂಟಿಂಗ್ ಕಂಡ “ಜೀಟಿಗೆ’ ಇನ್ನಷ್ಟೇ ತೆರೆ ಕಾಣಬೇಕಿದೆ.

ತುಳುನಾಡಿನ ದೈವಾರಾಧನೆ ಮತ್ತು ವಿಭಿನ್ನ ಕಟ್ಟುಪಾಡುಗಳನ್ನು ಬಿಂಬಿಸುವ ಕಲಾತ್ಮಕ ಚಿತ್ರ ಇದಾಗಿದೆ. ನವೀನ್ ಡಿ. ಪಡೀಲ್, ರೂಪಾ ವರ್ಕಾಡಿ, ಜೆ.ಪಿ. ತೂಮಿನಾಡ್, ಚೇತನ್ ರೈ ಮಾಣಿ, ಅರುಣ್ ರೈ ಸಹಿತ ಹಲವರು ತಾರಾಗಣದಲ್ಲಿದ್ದಾರೆ. ಚಿತ್ರಕಥೆ, ಸಂಭಾಷಣೆ ಶಶಿರಾಜ್ ಕಾವೂರು ಅವರದ್ದು. ಉನ್ನಿ ಮದವೂರ್ ಕೆಮರಾ, ಸ್ಯಾಕ್ಸೋಫೋನ್ ಜಯರಾಮ್ ಸಂಗೀತವಿದೆ.

ಒಂದು ಒಳ್ಳೆಯ ಸಿನೆಮಾ ಮಾಡಬೇಕು ಎಂಬುದಷ್ಟೇ ನಮ್ಮ ಉದ್ದೇಶವಾಗಿತ್ತು. ಅದನ್ನು ತುಂಬಾ ಶ್ರದ್ಧೆಯಿಂದ ಮಾಡಿದ್ದೇವೆ. ಈಗ ಅದನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ಈ ಚಿತ್ರದಲ್ಲಿ ದುಡಿದ ಎಲ್ಲರಿಗೆ, ನಮ್ಮ ಚಿತ್ರವನ್ನು ಗುರುತಿಸಿದ ಜ್ಯೂರಿಗಳಿಗೆ ಧನ್ಯವಾದ ಹೇಳಬಯಸುತ್ತೇನೆ ಎಂದು ಚಿತ್ರದ ನಿರ್ಮಾಪಕ ಅರುಣ ರೈ ತೋಡಾರು ಪ್ರತಿಕ್ರಿಯಿಸಿದ್ದಾರೆ.
The National Film Awards are the most prestigious awards for art and cinema in India. This year's National Film Awards, which were announced on July 22, saw actors and filmmakers taking home the award for the extraordinary work that they have done in Indian cinema. Among the long list of awards, the Tulu film Jeetige (Deevatige - traditional torch), which is helmed by Santhosh Mada won the Best Film Award in the Tulu film category.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm