ಬ್ರೇಕಿಂಗ್ ನ್ಯೂಸ್
03-10-20 03:07 pm Headline Karnataka News Network ಸಿನಿಮಾ
ನವ ದೆಹಲಿ, ಅಕ್ಟೋಬರ್ 03 : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಒಳಾಂಗಗಳ ಪೋಸ್ಟ್ ಮಾರ್ಟಂ ವರದಿಯನ್ನು ಏಮ್ಸ್ ಪುನರ್ಪರಿಶೀಲಿಸಿ ಸಿಬಿಐಗೆ ನೀಡಿದೆ. ಏಮ್ಸ್ ಪರಿಶೀಲನಾ ವರದಿಯ ಪ್ರಕಾರ ಸುಶಾಂತ್ ಸಿಂಗ್ ದೇಹದಲ್ಲಿ ಯಾವುದೇ ಜೈವಿಕ ವಿಷ ಪತ್ತೆಯಾಗಿಲ್ಲ ಎನ್ನಲಾಗಿದೆ.
ಸುಶಾಂತ್ ಸಾವು ಕೊಲೆ ಅಲ್ಲ, ಅದು ಆತ್ಮಹತ್ಯೆ ಪ್ರಕರಣವಾಗಿದೆ ಎಂದು ಖಾಸಗಿ ಮಾಧ್ಯಮವೊಂದರಲ್ಲಿ ಫೋರೆನ್ಸಿಕ್ ಮಂಡಳಿಯ ಮುಖ್ಯಸ್ಥ ಡಾ.ಸುಧೀರ್ ಗುಪ್ತ ಹೇಳಿದ್ದಾರೆ.
ಏಮ್ಸ್ ವೈದ್ಯರ ತಂಡವು ಅವರಲ್ಲಿ ಲಭ್ಯವಿರುವ ಶೇಕಡಾ 20 ರಷ್ಟು ಒಳಾಂಗಗಳ ಮಾದರಿಯನ್ನು ಆಧರಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಮತ್ತು ಒಳಾಂಗಗಳ ವರದಿಗಳನ್ನು ಮರು ಪರಿಶೀಲನೆ ಮಾಡಿತ್ತು. ಇಷ್ಟೇ ಅಲ್ಲದೆ ವಿಧಿವಿಜ್ಞಾನ ಸಂಸ್ಥೆಗಳು ಲ್ಯಾಪ್ಟಾಪ್, ಎರಡು ಹಾರ್ಡ್ ಡಿಸ್ಕ್, ಕ್ಯಾಮೆರಾ ಮತ್ತು ಎರಡು ಮೊಬೈಲ್ ಫೋನ್ಗಳನ್ನು ಪರೀಕ್ಷಿಸಿವೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಸಿಬಿಐ ಆತ್ಮಹತ್ಯೆಯ ದೃಷ್ಟಿಕೋನದಿಂದ ತನ್ನ ತನಿಖೆಯನ್ನು ಮುಂದುವರಿಸಲಿದ್ದು, ಒಂದು ವೇಳೆ ಕೊಲೆಗೆ ಪುರಾವೆಗಳು ಲಭಿಸಿದರೆ ಐಪಿಸಿಯ ಸೆಕ್ಷನ್ 302 ಅಡಿಯಲ್ಲಿ ಸೇರಿಸಲಾಗುತ್ತದೆ ಎನ್ನಲಾಗುತ್ತಿದೆ . ಆದರೆ, ಸಿಬಿಐ 57 ದಿನಗಳಿಂದ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇದುವರೆಗೆ ಕೊಲೆಯೆಂದು ಸಾಭೀತಾಗುವಂತಹ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.
34 ವಯಸ್ಸಿನ ಸುಶಾಂತ್ ಜೂ.14ರಂದು ಮುಂಬೈನಲ್ಲಿರುವ ಅವರ ಅಪಾರ್ಟ್ ಮೆಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಕರೆದಿದ್ದರೂ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹಗಳು ಹಬ್ಬಿದ್ದವು. ನ್ಯಾಯಕ್ಕಾಗಿ ಅಭಿಯಾನ ನಡೆಸಲಾಗಿತ್ತು. ಸುಶಾಂತ್ ಸಿಂಗ್ ಕುಟುಂಬದವರು ಶಂಕೆ ವ್ಯಕ್ತಪಡಿಸಿದ ಕಾರಣ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
ಈ ಪ್ರಕರಣದಲ್ಲಿ ನಿರ್ಣಾಯಕ ಔಷಧೀಯ ಹಾಗೂ ಕಾನೂನು ಅಭಿಪ್ರಾಯವನ್ನು ನೀಡಿದ ನಂತರ ಏಮ್ಸ್ ಸಮಿತಿಯು ಪರೀಕ್ಷೆಯನ್ನು ಪೂರ್ಣಗೊಳಿಸಿದೆ ಹಾಗೂ ಕಡತವನ್ನು ಮುಚ್ಚಿದೆ. ಸಿಬಿಐ ತಮ್ಮ ತನಿಖೆಯೊಂದಿಗೆ ವರದಿಯನ್ನು ದೃಢೀಕರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm