ಬ್ರೇಕಿಂಗ್ ನ್ಯೂಸ್
09-08-22 02:54 pm Source: Vijayakarnataka ಸಿನಿಮಾ
ಕನ್ನಡದಲ್ಲಿ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು ಬರುತ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ( The Endless One Bhagavan Nityananda ) ಎಂಬ ಹೆಸರಿನ ಹೊಸ ಸಿನಿಮಾವೊಂದು ಬರುತ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ( Vinay Guruji ) ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ವಿನಯ್ ಗುರೂಜಿ ಸಿನಿಮಾ ಬಗ್ಗೆ ಹೇಳಿದ್ದೇನು?

ವಿನಯ್ ಗುರೂಜಿ ಮಾತನಾಡಿ, "ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್ನಲ್ಲಿ ಒಂದೇ ತತ್ವ- ಮನುಷ್ಯತ್ವ. ಅಲ್ಲಿ ಮತಕ್ಕೆ ಜಾಗವಿಲ್ಲ. ಮನುಷ್ಯತ್ವಕ್ಕಿಂತ ದೊಡ್ಡ ತತ್ವ ಮತ್ತೊಂದಿಲ್ಲ. ಶಿರಡಿಬಾಬಾ ಸೀರಿಯಲ್ ಬಂದಮೇಲೆ ಬಾಬಾ ಬಗ್ಗೆ ಗೊತ್ತಾಗಿದ್ದು, ಶ್ರೀನಿವಾಸ ಕಲ್ಯಾಣ ಸಿನಿಮಾ ಆದ್ಮೇಲೆ ತಿರುಪತಿ ಬಗ್ಗೆ ಗೊತ್ತಾಯ್ತು. ಅದೇ ರೀತಿ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದಲ್ಲಿ ಹಲವು ವಿಷಯಗಳನ್ನು ಜನರಿಗೆ ತಲುಪಿಸುವ ಕೆಲಸವಾಗಿದೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಿರ್ಮಾಪಕ ಕೃಷ್ಣ ಕೆ ಆರ್ ಹೇಳಿದ್ದೇನು?

ನಿರ್ಮಾಪಕ ಕೃಷ್ಣ ಕೆ.ಆರ್ ಮಾತನಾಡಿ, "ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದು, ನಮ್ಮ ಫ್ಯಾಮಿಲಿ ಭಗವಾನ್ ನಿತ್ಯಾನಂದ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದೇವೆ. ಈ ಸಿನಿಮಾ ಮಾಡುವ ಮೂಲಕ ಚಿಕ್ಕದೊಂದು ಅಳಿಲು ಸೇವೆ ಮಾಡುತ್ತಿದ್ದೇವೆ" ಎಂದರು.
ಸಿನಿಮಾ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ
ಸಿನಿಮಾಗೆ The endless one ಭಗವಾನ್ ಶ್ರೀ ನಿತ್ಯಾನಂದ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದ್ದು, ಲಕ್ಷ್ಮಸ್ ಸ ಖೋಡೇ ಅವರ ಮರಿ ಮಗ, ಪದ್ಮಾನಾಭ ಸ ಖೋಡೇ ಅವರ ಮೊಮ್ಮಗ ಶ್ರೀಕೃಷ್ಣ ಕೆ ಆರ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಗುಲಾಬ್ ಪ್ರೊಡಕ್ಷನ್ ನಡಿಯಲ್ಲಿ ತಯಾರಾಗ್ತಿರುವ ಚೊಚ್ಚಲ ಸಿನಿಮಾ ಇದಾಗಿದ್ದು, ಅದ್ದೂರಿಯಾಗಿ ಚಿತ್ರ ನಿರ್ಮಾಣ ನಿರ್ಮಾಪಕ ಕೃಷ್ಣ ಸಜ್ಜಾಗಿದ್ದು, ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ಮೂಡಿಬರಲಿದೆ. ಸದ್ಯದಲ್ಲಿಯೇ ಉಳಿದ ಸ್ಟಾರ್ ಕಾಸ್ಟ್, ತಂತ್ರಜ್ಞಾನರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.
ಮನುಷ್ಯತ್ವ-ಪ್ರೀತಿ ಬೋಧಿಸದ ಧರ್ಮ ಗ್ರಂಥಗಳಿಲ್ಲ! ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಖಂಡಿಸಿದ ವಿನಯ್ ಗುರೂಜಿ.
Vinay Guruji Support The Endless One Bhagavan Nityananda Movie.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am