ಬ್ರೇಕಿಂಗ್ ನ್ಯೂಸ್
10-08-22 02:42 pm Source: Vijayakarnataka ಸಿನಿಮಾ
ಔಟ್ ಅಂಡ್ ಔಟ್ ಫ್ಯಾಮಿಲಿ ಕಮರ್ಶಿಯಲ್ ಸೀರಿಯಲ್ಗಳ ಮಧ್ಯೆ ಕಿರುತೆರೆ ವೀಕ್ಷಕರ ಗಮನ ಸೆಳೆದಿದ್ದು ‘ಶನಿ’ (Shani) ಧಾರಾವಾಹಿ. ಶನಿದೇವನ ಚರಿತ್ರೆ ಕುರಿತಾದ ಕಥಾಹಂದರ ಹೊಂದಿದ್ದ ಪೌರಾಣಿಕ ಧಾರಾವಾಹಿ ‘ಶನಿ’. ಈ ಸೀರಿಯಲ್ನಲ್ಲಿ ಶನಿದೇವನ ಪಾತ್ರ ನಿಭಾಯಿಸಿದವರು ಸುನೀಲ್ (Sunil). ‘ಶನಿ’ ಸೀರಿಯಲ್ ಮುಗಿದ ನಂತರ ಕಿರುತೆರೆಯಿಂದ ಗ್ಯಾಪ್ ಪಡೆದಿದ್ದ ಸುನೀಲ್ ಇದೀಗ ಕಮ್ ಬ್ಯಾಕ್ ಮಾಡಿದ್ದಾರೆ.
ಹೌದು.. ‘ಶನಿ’ ಸೀರಿಯಲ್ ಖ್ಯಾತಿಯ ನಟ ಸುನೀಲ್ ಮತ್ತೆ ಕಿರುತೆರೆಗೆ ಮರಳಿದ್ದಾರೆ. ಹೊಸ ಧಾರಾವಾಹಿಯಲ್ಲಿ ಸುನೀಲ್ ಅಭಿನಯಿಸಿದ್ದಾರೆ. ಆ ಹೊಸ ಸೀರಿಯಲ್ ಯಾವುದು ಅಂದ್ರಾ..?
ಕೆಂಡಸಂಪಿಗೆ (Kendasampige)

‘ಕೆಂಡಸಂಪಿಗೆ’ ಎಂಬ ಹೊಸ ಸೀರಿಯಲ್ನಲ್ಲಿ ಸುನೀಲ್ ಅಭಿನಯಿಸಿದ್ದಾರೆ. ಅತೀ ಶೀಘ್ರದಲ್ಲೇ ‘ಕೆಂಡಸಂಪಿಗೆ’ ಸೀರಿಯಲ್ (Kendasampige Serial) ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಸೀರಿಯಲ್ನಲ್ಲಿ ಅಕ್ಕ- ತಮ್ಮನ ನಡುವಿನ ಪ್ರೀತಿಯೇ ಹೈಲೈಟ್ ಅಗಿದ್ದು, ತಮ್ಮನ ಪಾತ್ರದಲ್ಲಿ ಸುನೀಲ್ ಅಭಿನಯಿಸಿದ್ದಾರೆ.
ಪ್ರೋಮೋ ಔಟ್
‘ಕೆಂಡಸಂಪಿಗೆ’ ಧಾರಾವಾಹಿಯ ಪ್ರೋಮೋ ಬಿಡುಗಡೆಯಾಗಿದ್ದು, ಸಖತ್ ರಫ್ ಅಂಡ್ ಟಫ್ ಪಾತ್ರದಲ್ಲಿ ಸುನೀಲ್ ಕಾಣಿಸಿಕೊಂಡಿದ್ದಾರೆ. ಸುನೀಲ್ ಅವರ ಪಂಚಿಂಗ್ ಡೈಲಾಗ್ ವೀಕ್ಷಕರಿಗೆ ಇಷ್ಟವಾಗಿದೆ.
ಪ್ರಸಾರ ಯಾವಾಗ?
ಆಗಸ್ಟ್ 22 ರಿಂದ ಸಂಜೆ 6:30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಕೆಂಡಸಂಪಿಗೆ’ ಪ್ರಸಾರವಾಗಲಿದೆ.
ದೀನಬಂಧು ಆಶ್ರಮದಲ್ಲಿ ಬೆಳೆದ ಹುಡುಗ ಸುನೀಲ್
ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಪುತ್ರ ಜಯದೇವ್ ಅವರು ಚಾಮರಾಜನಗರದಲ್ಲಿ ನಡೆಸುತ್ತಿರುವ ದೀನಬಂಧು ಆಶ್ರಮದ ಹುಡುಗ ಸುನೀಲ್. ಇದೇ ಆಶ್ರಮದಲ್ಲೇ ಸುನೀಲ್ ವಿದ್ಯಾಭ್ಯಾಸ ಪಡೆದುಕೊಂಡಿದ್ದಾರೆ. ಚಿಕ್ಕವಯಸ್ಸಿನಿಂದಲೂ ನಟನೆಯಲ್ಲಿ ಸುನೀಲ್ ಅವರಿಗೆ ಅತೀವ ಆಸಕ್ತಿಯಿತ್ತು.
ಶನಿ ಸೀರಿಯಲ್ಗೆ ಸುನೀಲ್ ಆಯ್ಕೆ ಆಗಿದ್ದು ಹೇಗೆ?

ಯಕ್ಷಗಾನ ಕಲಿಯಲು ಉಡುಪಿಗೆ ಹೋಗಿದ್ದಾಗ, ಅಲ್ಲಿ ‘ಶನಿ’ ಸೀರಿಯಲ್ ಆಡಿಷನ್ ನಡೆಯುತ್ತಿತ್ತು. ಆಡಿಷನ್ನಲ್ಲಿ ಕಾಸ್ಟಿಂಗ್ ಡೈರೆಕ್ಟರ್ ನೀಡಿದ ಡೈಲಾಗ್ಅನ್ನ ಸುನೀಲ್ ಪರ್ಫೆಕ್ಟ್ ಆಗಿ ಹೇಳಿದರು. ಪರಿಣಾಮ, ‘ಶನಿ’ ಪಾತ್ರಕ್ಕೆ ಸುನೀಲ್ ಆಯ್ಕೆಯಾದರು.
ಅಸಲಿಗೆ, ‘ಶನಿ’ ಪಾತ್ರಕ್ಕಾಗಿ ಸುಮಾರು 500 ಮಂದಿಯನ್ನು ಆಡಿಷನ್ ಮಾಡಲಾಗಿತ್ತು. 500 ಮಂದಿ ಪೈಕಿ ಆಯ್ಕೆ ಆಗಿದ್ದು ಸುನೀಲ್. ‘ಶನಿ’ ಸೀರಿಯಲ್ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ‘ಕೆಂಡಸಂಪಿಗೆ’ ಸೀರಿಯಲ್ ಮೂಲಕ ಕಿರುತೆರೆ ವೀಕ್ಷಕರ ಮನೆ ಮನ ಗೆಲ್ಲಲು ಸುನೀಲ್ ಮರಳುತ್ತಿದ್ದಾರೆ.
Sunil Of Shani Serial Fame Makes Comeback With Kendasampige Serial.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm