ಬ್ರೇಕಿಂಗ್ ನ್ಯೂಸ್
11-08-22 09:58 pm Source: Vijaykarnataka ಸಿನಿಮಾ
ನಟ ರಾಕಿಂಗ್ ಸ್ಟಾರ್ ಯಶ್ ( Yash ) ಅವರು 'ಕೆಜಿಎಫ್ 2' ಚಿತ್ರದಲ್ಲಿ ತೇಲುತ್ತಿದ್ದಾರೆ. ಯಶ್ ಮುಂದಿನ ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ. ಈ ನಡುವೆ ಗುರುವಾರ ಮೈಸೂರಲ್ಲಿ ಯಶ್ ಹವಾ ಜೋರಿತ್ತು. ಒಂದು ಸಣ್ಣ ಬದಲಾವಣೆ ಜೀವನದಲ್ಲಿ ಸಾಕಷ್ಟು ಬದಲಾವಣೆ ತರುತ್ತದೆ. ಆತ್ಮವಿಶ್ವಾಸವಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದರು.
ಮೈಸೂರುನಗರದ ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಯುವಜನ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಮೈಸೂರು ನಮ್ಮೂರು. ಇಲ್ಲಿನ ಪಡುವಾರಹಳ್ಳಿ, ಕಾಳಿದಾಸ ರಸ್ತೆ ಹಾಗೂ ಗಂಗೋತ್ರಿಯಲ್ಲಿ ಓಡಾಡಿದ್ದೇನೆ. ನಮ್ಮೂರಿನಲ್ಲಿ ದೇಶದ ಹೆಮ್ಮೆಯ ಧ್ವಜ ಹಿಡಿಯುವ ಕಾರ್ಯಕ್ರಮ ಆಯೋಜಿಸಿರುವುದರಿಂದ ಬಹಳ ಹೆಮ್ಮೆಯಿಂದ ಬಂದಿದ್ದೇನೆ. ವಿದ್ಯಾರ್ಥಿ ದಿಸೆಯಲ್ಲಿ ನಾನು ತಂದೆ ತಾಯಿ ಖುಷಿಯಾಗುವಂತೆ ಇರಲಿಲ್ಲ. ಒಂದು ಸಣ್ಣ ಬದಲಾವಣೆ ಜೀವನದಲ್ಲಿ ಸಾಕಷ್ಟು ಬದಲಾವಣೆ ತರುತ್ತದೆ. ನಾನೇನು ಹೆಚ್ಚು ಬದಲಾಗಿಲ್ಲ. ಮೊದಲು ಹೇಗಿದ್ದೆನೋ ಈಗಲೂ ಅದೇ ರೀತಿ ಇದ್ದೇನೆ" ಎಂದರು.
![]()
"ನಾವೀಗ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮಾಡುತ್ತಿದ್ದೇವೆ. ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸದುಪಯೋಗ ಮಾಡಿಕೊಳ್ಳಬೇಕು. ಎಲ್ಲವನ್ನು ಜನರ ಮನೆ ಮುಂದೆ ತರಲು ಸರಕಾರಕ್ಕೂ ಕಷ್ಟಸಾಧ್ಯ. ಪ್ರತಿಯೊಬ್ಬರೂ ಜೀವನದಲ್ಲಿ ತಮಾಷೆ ಮಾಡ್ತಾ ಇರಿ, ಮಜಾ ಮಾಡ್ಕೊಂಡಿರಿ, ನಗು ನಗುತ್ತಾ ಇರಿ. ಸಂತಸದ ಯಾವುದೇ ಅವಕಾಶವನ್ನು ಕಳೆದುಕೊಳ್ಳಬೇಡಿ" ಎಂದು ಅವರು ಸಲಹೆ ನೀಡಿದರು.
![]()
"ಹುಚ್ಚು ಆತ್ಮ ವಿಶ್ವಾಸ ಇರಬೇಕು. ಕನ್ನಡ ಚಿತ್ರರಂಗ ದೊಡ್ಡದಾಗಿ ಬೆಳೆಯುತ್ತಾ ಅಂತ ಯಾರಾದರೂ ಊಹೆ ಮಾಡಿದ್ರಾ? ನೀವು ಒಳ್ಳೆಯದನ್ನ ಮಾತಾಡ್ತಾ, ಯೋಚನೆ ಮಾಡ್ತಾ ಹೋಗಿ. ತಂತಾನೆ ಅದು ಒಳ್ಳೆಯದಾಗುತ್ತದೆ. ನೀವು ಒಳ್ಳೆಯದು ಮಾಡ್ತಾ ಹೋಗಿ. ನಮ್ಮೊಳಗೆ ಸರ್ಕಾರ ಹುಟ್ಟಬೇಕು. ಪ್ರತಿಯೊಬ್ಬ ತನ್ನ ವೃತ್ತಿಯಲ್ಲಿ ಕಷ್ಟಪಟ್ಟು ಮುಂದೆ ಬರುವ ಮೂಲಕದೇಶದ ಪ್ರಗತಿ ಸಾಧಿಸಬಹುದು. ಹಳ್ಳಿಯ ಮೂಲೆಯಿಂದ ಬೆಳೆಯಬಹುದು. ನಿಮ್ಮಲ್ಲಿ ಸಾಧಿಸುವ ಚಲ ಇದ್ದರೆ ಗೆಲುವು ಸಾಧ್ಯ ಎಂದರು.ಮಜಾ ಮಾಡಿ, ತುಂಬಾ ಸೀರಿಯಸ್ ಆಗಬೇಡಿ. ಸಣ್ಣ ಸಣ್ಣ ಖುಷಿ ಅನುಭವಿಸಿ. ಫ್ರೆಂಡ್ಸ್ ಜೊತೆ ಸುತ್ತಾಡಿ, ಜೀವನ ಅನುಭವಿಸಿ. ಸಿಎಂ ಹಲವು ಕನಸು ಹೊಂದಿದ್ದಾರೆ. ಅವರ ಕನಸುಗಳೆಲ್ಲ ಈಡೇರಲಿ" ಎಂದು ಆಶಿಸುವೆ ಎಂದರು.
ನಟ ಯಶ್ ವೇದಿಕೆ ಏರುತ್ತಿದ್ದಂತೆ ವಿದ್ಯಾರ್ಥಿ ಸಮೂಹ ಶಿಳ್ಳೆ, ಚಪ್ಪಾಳೆ ತಟ್ಟಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು. ಯಾರೇ ಅತಿಥಿ ಭಾಷಣಕ್ಕೆ ನಿಂತರೂ ರಾಕಿ, ರಾಕಿ ಎಂಬ ಘೋಷಣೆ ಕೂಗುತ್ತಿದ್ದರು.
ವಿದ್ಯಾರ್ಥಿಗಳ ಉತ್ಸಾಹದಿಂದ ಪ್ರೇರೇಪಿತರಾದ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ತಮ್ಮ ಭಾಷಣದಲ್ಲಿ ಯಶ್ ಅವರನ್ನು ಹೊಗಳಿದರು. ಯಶ್ ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಮಾತ್ರವಲ್ಲ. ಅವರು ಯುವಕರ ಐಕಾನ್. ಕನ್ನಡ ಚಿತ್ರರಂಗ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗ ಅವರ ಕಡೆ ತಿರುಗಿ ನೋಡಿದೆ. ಕೆಜಿಎಫ್ 1, ಕೆಜಿಎಫ್ 2 ಚಿತ್ರಗಳ ಯಶಸ್ಸಿನ ಮೂಲಕ ಇಡೀ ದೇಶಕ್ಕೆ ಅವರು ರಾಕಿಂಗ್ ಸ್ಟಾರ್ ಆಗಿದ್ದಾರೆ. ಕನ್ನಡ, ಕನ್ನಡತನವನ್ನು ಇಡೀ ದೇಶದಾದ್ಯಂತ ಯಶ್ ಪಸರಿಸಿದ್ದಾರೆ. ಅವರಂತೆ ನೀವು ಆಗಬೇಕು. ಆತ್ಮವಿಶ್ವಾಸ ಇದ್ದರೆ ಯಾರು ಏನು ಬೇಕಾದರೂ ಆಗಬಹುದು ಎಂದರು.
Rocking Star Yash Motivational Speech At Mysore Yuvajana Mahotsava.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm