ಬ್ರೇಕಿಂಗ್ ನ್ಯೂಸ್
18-08-22 01:40 pm Source: Vijayakarnataka ಸಿನಿಮಾ
ಆಮಿರ್ ಖಾನ್ ನಟನೆಯ 'ಲಾಲ್ ಸಿಂಗ್ ಛಡ್ಡಾ', ಅಕ್ಷಯ್ ಕುಮಾರ್ 'ರಕ್ಷಾ ಬಂಧನ್' ಸಿನಿಮಾಗಳನ್ನು ಬಾಯ್ಕಾಟ್ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆಲಿಯಾ ಭಟ್, ಕರೀನಾ ಕಪೂರ್ ಮುಂತಾದ ನಟರನ್ನು ಕೆಲ ಕಾರಣಗಳಿಗೆ ಬಾಯ್ಕಾಟ್ ಮಾಡಬೇಕು ಎಂದು ಹೇಳಲಾಗಿತ್ತು. ಈ ಬಗ್ಗೆ ಅರ್ಜುನ್ ಕಪೂರ್ ( Arjun Kapoor ) ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದಾರೆ. ಈ ಮಾತು ಬಿಜೆಪಿಯ ನರೋತ್ತಮ್ ಮಿಶ್ರಾ ( Narottam Mishra ) ಕಿವಿಗೂ ಬಿದ್ದಿದೆ.
ಹ್ಯಾಶ್ಟ್ಯಾಗ್ಗೂ, ರಿಯಾಲಿಟಿಗೂ ಸಂಬಂಧ ಇಲ್ಲದಾಗಿದೆ!
"ನಾವು ತುಂಬ ಸಮಯದಿಂದ ಮೌನವಾಗಿದ್ದು ತಪ್ಪು ಮಾಡಿದೆವು. ನಮ್ಮ ಶಿಸ್ತನ್ನು ವೀಕ್ನೆಸ್ ಆಗಿ ಪರಿಗಣಿಸಲಾಗಿದೆ. ಕೆಲಸ ಮಾತನಾಡಬೇಕು ಎಂದು ನಂಬಿದ್ದೇವೆ, ನಾವು ತುಂಬ ಸಹಿಸಿಕೊಂಡೆವು ಅಂತ ಅನಿಸುತ್ತದೆ, ಅದನ್ನೇ ಜನರು ಈಗ ಬಳಸಿಕೊಂಡಿದ್ದಾರೆ. ನಾವೆಲ್ಲ ಒಟ್ಟಾಗಿ ಪ್ರಾಮಾಣಿಕತೆಯಿಂದ ಏನಾದರೂ ಮಾಡಬೇಕು. ಈಗ ಏನು ಬರೆಯಲಾಗುತ್ತಿದೆಯೋ, ಏನು ಹ್ಯಾಶ್ಟ್ಯಾಗ್ ಕ್ರಿಯೇಟ್ ಮಾಡಲಾಗುತ್ತಿದೆಯೋ ಅದು ರಿಯಾಲಿಟಿಯಿಂದ ತುಂಬ ದೂರ ಇದೆ" ಎಂದು ಅರ್ಜುನ್ ಕಪೂರ್ ಹೇಳಿದ್ದಾರೆ.
ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿಲ್ಲ

"ಚಿತ್ರರಂಗ ಅದರ ಕಾಂತಿಯನ್ನು ಕಳೆದುಕೊಳ್ಳುತ್ತಿದೆ. ನಾವು ಅಂಧರಾಗಿ ಹೋಗಲಿ ಬಿಡಿ ಎನ್ನುವಂತೆ ಇದ್ದೇವೆ. ಥಿಯೇಟರ್ ಓಪನ್ ಆಗುತ್ತಿದ್ದಂತೆ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತದೆ, ಎಲ್ಲವೂ ಒಳ್ಳೆಯದಾಗುತ್ತದೆ ಎಂದುಕೊಂಡಿದ್ದೆವು. ಕಳೆದ ಎರಡು ತಿಂಗಳಿನಿಂದ ಸುಮಾರು ಸಿನಿಮಾಗಳು ಉತ್ತಮ ಪ್ರದರ್ಶನ ಕಂಡಿಲ್ಲ" ಎಂದಿದ್ದಾರೆ ಅರ್ಜುನ್ ಕಪೂರ್ ಅರ್ಜುನ್ ಕಪೂರ್ ನಟನೆಯ 'ಏಕ್ ವಿಲನ್ ರಿಟರ್ನ್ಸ್' ಸಿನಿಮಾ ಚೆನ್ನಾಗಿ ಕಮಾಯಿ ಮಾಡಿರಲಿಲ್ಲ. ಒಟ್ಟೂ 40 ಕೋಟಿ ರೂಪಾಯಿ ಗಳಿಸಿದ್ದ ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿರಲಿಲ್ಲ.
ಬಿಜೆಪಿ ನರೋತ್ತಮ್ ಮಿಶ್ರಾ ಹೇಳಿದ್ದೇನು?

ಅರ್ಜುನ್ ಕಪೂರ್ ಅವರ ಮಾತುಗಳನ್ನು ಕೇಳಿಸಿಕೊಂಡ ಬಿಜೆಪಿಯ ನರೋತ್ತಮ್ ಮಿಶ್ರಾ ಅವರು, "ನಟ ಅರ್ಜುನ್ ಕಪೂರ್ ಅವರು ಸಮಾಜಕ್ಕೆ ಧಮ್ಕಿ ಹಾಕೋದು ಸರಿಯಲ್ಲ. ಸಾರ್ವಜನಿಕರಿಗೆ ಬೆದರಿಕೆ ಹಾಕುವ ಬದಲು, ನಟನೆ ಬಗ್ಗೆ ಗಮನ ಕೊಡಲಿ. ತಮ್ಮ ಸಿನಿಮಾಗಳಲ್ಲಿ ಹಿಂದೂ ಧರ್ಮವನ್ನು ಗುರಿಯಾಗಿಟ್ಟುಕೊಂಡು ಕೆಲ ಗ್ಯಾಂಗ್ ಸಾರ್ವಜನಿಕರಿಗೆ ಬಾಯ್ಕಾಟ್ ವಿಚಾರವಾಗಿ ಬೆದರಿಕೆಯನ್ನು ಏಕೆ ಹಾಕುತ್ತಾರೆ?" ಎಂದು ಪ್ರಶ್ನೆ ಮಾಡಿದ್ದಾರೆ.
ಅರ್ಜುನ್ ಕಪೂರ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬಂದ ಕಾಮೆಂಟ್ಸ್ ಇಂತಿವೆ
Narottam Mishra Reaction On Arjun Kapoor Opinion About Boycott Trend.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm