Shivarajkumar Prabhudeva Starrer New Movie Shooting Starts In Bengaluru.
">ಬ್ರೇಕಿಂಗ್ ನ್ಯೂಸ್
29-08-22 03:02 pm Source: Vijayakarnataka ಸಿನಿಮಾ
'ಹ್ಯಾಟ್ರಿಕ್ ಹೀರೋ' ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ, ಯೋಗರಾಜ್ ಭಟ್ ನಿರ್ದೇಶನದ ಹೊಸ ಸಿನಿಮಾಕ್ಕೆ ಕಳೆದ ಜೂನ್ನಲ್ಲಿ ಮುಹೂರ್ತ ನೆರವೇರಿತ್ತು. ಆನಂತರ ನಿರ್ದೇಶಕ ಯೋಗರಾಜ್ ಭಟ್ ಅವರು 'ಗಾಳಿಪಟ 2' ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಇದೀಗ ಅವರು ಪುನಃ ಸಿನಿಮಾ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ.
ಈ ಸಿನಿಮಾವನ್ನು ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್ಲೈನ್ ಎಂಟರ್ಟೇನ್ಮೆಂಟ್ ಲಾಂಛನದಲ್ಲಿ ರಾಕ್ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿದ್ದಾರೆ. ಇದು ಈ ಬ್ಯಾನರ್ನ 47ನೇ ಸಿನಿಮಾವಾಗಿದೆ. ಈ ಸಿನಿಮಾವನ್ನು ನಿರ್ಮಾಣ ಮಾಡುವುದರ ಜೊತೆಗೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲೂ ರಾಕ್ಲೈನ್ ವೆಂಕಟೇಶ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ.
ಈ ಚಿತ್ರದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ, ತೆಲುಗು ಸಾಹಿತಿ ತನಿಕೆಳ್ಳ ಭರಣಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರ ಇವರದ್ದಾಗಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ಕೊಡಲಿದ್ದಾರೆ. ತನಿಕೆಳ್ಳ ಭರಣಿ ಜತೆಗೆ ಇನ್ನಷ್ಟು ಪ್ರಮುಖ ಕಲಾವಿದರು ನಟಿಸಲಿದ್ದಾರೆ. ಹಾಗಾಗಿ ಇದು ಬಹು ಭಾಷೆಯಲ್ಲಿ ಬಿಡುಗೆಯಾಗುವ ಸಿನಿಮಾ ಎನ್ನಲಾಗಿದೆ. ಪ್ರಭುದೇವ ಇರುವುದರಿಂದ ಎಲ್ಲಾ ಭಾಷೆಯಲ್ಲಿಯೂ ಬಿಡುಗಡೆ ಮಾಡಬಹುದು.
![]()
ಇನ್ನು, ಈ ಹಿಂದೆ ‘ರಾಜಕುಮಾರ’, ‘ಆರೆಂಜ್’, ‘ಜೇಮ್ಸ್’ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರಿಯಾ ಆನಂದ್, ಈಗ ಯೋಗರಾಜ್ ಭಟ್ ಅವರ ಈ ಬಿಗ್ ಬಜೆಟ್ ಸಿನಿಮಾಕ್ಕೂ ಆಯ್ಕೆಯಾಗಿದ್ದಾರೆ. ಹಾಗೆಯೇ ಕನ್ನಡದ ಪ್ರತಿಭಾವಂತ ನಟಿ ನಿಶ್ವಿಕಾ ನಾಯ್ಡು ಕೂಡ ಈ ಸಿನಿಮಾದ ಭಾಗವಾಗಿದ್ದಾರೆ. ಈ ಹಿಂದೆ 'ಗಾಳಿಪಟ 2' ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ನಾಯಕಿಯಾಗುತ್ತಿದ್ದಾರೆ. ಆದರೆ ಇವರಿಬ್ಬರಲ್ಲಿ ಯಾರು ಯಾರಿಗೆ ನಾಯಕಿ ಎಂಬುದು ರಿವೀಲ್ ಆಗಿಲ್ಲ.
ಅಂದಹಾಗೆ, ಇದು ಹಳ್ಳಿ ಬ್ಯಾಕ್ಗ್ರೌಂಡ್ನಲ್ಲಿ ನಡೆಯುವ ಕಥೆ. ಈ ಕಥೆಯಲ್ಲಿಇಬ್ಬರೂ ನಾಯಕಿಯರು ಹಳ್ಳಿ ಹುಡುಗಿಯರಾಗಿರಲಿದ್ದಾರೆ. ಮೊದಲ ಹಂತದ ಚಿತ್ರೀಕರಣದಲ್ಲಿ ಅವರು ಕೂಡ ಭಾಗಿಯಾಗಿದ್ದಾರೆ.
Shivarajkumar Prabhudeva Starrer New Movie Shooting Starts In Bengaluru.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm