Shivarajkumar Prabhudeva Starrer New Movie Shooting Starts In Bengaluru.
">ಬ್ರೇಕಿಂಗ್ ನ್ಯೂಸ್
29-08-22 03:02 pm Source: Vijayakarnataka ಸಿನಿಮಾ
'ಹ್ಯಾಟ್ರಿಕ್ ಹೀರೋ' ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ, ಯೋಗರಾಜ್ ಭಟ್ ನಿರ್ದೇಶನದ ಹೊಸ ಸಿನಿಮಾಕ್ಕೆ ಕಳೆದ ಜೂನ್ನಲ್ಲಿ ಮುಹೂರ್ತ ನೆರವೇರಿತ್ತು. ಆನಂತರ ನಿರ್ದೇಶಕ ಯೋಗರಾಜ್ ಭಟ್ ಅವರು 'ಗಾಳಿಪಟ 2' ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಇದೀಗ ಅವರು ಪುನಃ ಸಿನಿಮಾ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ನ ಸಿನಿಮಾಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ.
ಈ ಸಿನಿಮಾವನ್ನು ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್ಲೈನ್ ಎಂಟರ್ಟೇನ್ಮೆಂಟ್ ಲಾಂಛನದಲ್ಲಿ ರಾಕ್ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿದ್ದಾರೆ. ಇದು ಈ ಬ್ಯಾನರ್ನ 47ನೇ ಸಿನಿಮಾವಾಗಿದೆ. ಈ ಸಿನಿಮಾವನ್ನು ನಿರ್ಮಾಣ ಮಾಡುವುದರ ಜೊತೆಗೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲೂ ರಾಕ್ಲೈನ್ ವೆಂಕಟೇಶ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ.
ಈ ಚಿತ್ರದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ, ತೆಲುಗು ಸಾಹಿತಿ ತನಿಕೆಳ್ಳ ಭರಣಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಪ್ರಮುಖ ಪಾತ್ರ ಇವರದ್ದಾಗಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಎಂಟ್ರಿ ಕೊಡಲಿದ್ದಾರೆ. ತನಿಕೆಳ್ಳ ಭರಣಿ ಜತೆಗೆ ಇನ್ನಷ್ಟು ಪ್ರಮುಖ ಕಲಾವಿದರು ನಟಿಸಲಿದ್ದಾರೆ. ಹಾಗಾಗಿ ಇದು ಬಹು ಭಾಷೆಯಲ್ಲಿ ಬಿಡುಗೆಯಾಗುವ ಸಿನಿಮಾ ಎನ್ನಲಾಗಿದೆ. ಪ್ರಭುದೇವ ಇರುವುದರಿಂದ ಎಲ್ಲಾ ಭಾಷೆಯಲ್ಲಿಯೂ ಬಿಡುಗಡೆ ಮಾಡಬಹುದು.
![]()
ಇನ್ನು, ಈ ಹಿಂದೆ ‘ರಾಜಕುಮಾರ’, ‘ಆರೆಂಜ್’, ‘ಜೇಮ್ಸ್’ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರಿಯಾ ಆನಂದ್, ಈಗ ಯೋಗರಾಜ್ ಭಟ್ ಅವರ ಈ ಬಿಗ್ ಬಜೆಟ್ ಸಿನಿಮಾಕ್ಕೂ ಆಯ್ಕೆಯಾಗಿದ್ದಾರೆ. ಹಾಗೆಯೇ ಕನ್ನಡದ ಪ್ರತಿಭಾವಂತ ನಟಿ ನಿಶ್ವಿಕಾ ನಾಯ್ಡು ಕೂಡ ಈ ಸಿನಿಮಾದ ಭಾಗವಾಗಿದ್ದಾರೆ. ಈ ಹಿಂದೆ 'ಗಾಳಿಪಟ 2' ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ನಾಯಕಿಯಾಗುತ್ತಿದ್ದಾರೆ. ಆದರೆ ಇವರಿಬ್ಬರಲ್ಲಿ ಯಾರು ಯಾರಿಗೆ ನಾಯಕಿ ಎಂಬುದು ರಿವೀಲ್ ಆಗಿಲ್ಲ.
ಅಂದಹಾಗೆ, ಇದು ಹಳ್ಳಿ ಬ್ಯಾಕ್ಗ್ರೌಂಡ್ನಲ್ಲಿ ನಡೆಯುವ ಕಥೆ. ಈ ಕಥೆಯಲ್ಲಿಇಬ್ಬರೂ ನಾಯಕಿಯರು ಹಳ್ಳಿ ಹುಡುಗಿಯರಾಗಿರಲಿದ್ದಾರೆ. ಮೊದಲ ಹಂತದ ಚಿತ್ರೀಕರಣದಲ್ಲಿ ಅವರು ಕೂಡ ಭಾಗಿಯಾಗಿದ್ದಾರೆ.
Shivarajkumar Prabhudeva Starrer New Movie Shooting Starts In Bengaluru.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm