Cadaver Movie Actress Amala Paul Files Harassment Case Against Ex Friend Bhavninder Singh.
">ಬ್ರೇಕಿಂಗ್ ನ್ಯೂಸ್
01-09-22 02:08 pm Source: Vijayakarnataka ಸಿನಿಮಾ
ನಟಿ ಅಮಲಾ ಪೌಲ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಾರಣ, ಮಾಜಿ ಬಾಯ್ಫ್ರೆಂಡ್ ಭವಿಂದರ್ ಸಿಂಗ್! ಎಲ್ಲರಿಗೂ ಗೊತ್ತಿರುವಂತೆ ಭವ್ನಿಂದರ್ ಸಿಂಗ್ ಜೊತೆಗೆ ಅಮಲಾ ಸ್ನೇಹ ಬೆಳೆಸಿದ್ದರು. ಇಬ್ಬರು ಮದುವೆ ಕೂಡ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈ ಮಧ್ಯೆ ಇಬ್ಬರ ನಡುವಿನ ಸ್ನೇಹ ಹಳಸಿತು. ದೂರ ದೂರ ಆಗಿದ್ದ ಈ ಜೋಡಿ ಈಗ ಮತ್ತೆ ಸದ್ದು ಮಾಡುತ್ತಿದೆ. ಭವ್ನಿಂದರ್ ಸಿಂಗ್ ವಿರುದ್ಧ ಅಮಲಾ ದೂರು ನೀಡಿದ್ದಾರೆ!
ಭವಿಂದರ್ ವಿರುದ್ಧ ದೌರ್ಜನ್ಯ ಕೇಸ್
ಮಾಜಿ ಸ್ನೇಹಿತ ಭವ್ನಿಂದರ್ ವಿರುದ್ಧ ಅಮಲಾ ಪೌಲ್ ದೌರ್ಜನ್ಯ, ವಂಚನೆ ಕೇಸ್ ದಾಖಲಿಸಿದ್ದು, ಎಫ್ಐಆರ್ ಕೂಡ ದಾಖಲಾಗಿದೆ. ವಿಲ್ಲುಪುರಂ ಜಿಲ್ಲೆಯಲ್ಲಿ ಈ ಎಫ್ಐಆರ್ ದಾಖಲಾಗಿದ್ದು, ಅಮಲಾ ನೀಡಿದ ದೂರಿನ ಅನ್ವಯ ಭವ್ನಿಂದರ್ರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಏನಿದು ಪ್ರಕರಣ?
2018ರಲ್ಲಿ ಅಮಲಾ ಮತ್ತು ಭವ್ನಿಂದರ್ ಜಂಟಿಯಾಗಿ ಒಂದು ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದರು. ಆದರೆ ಈ ಜೋಡಿ ಕಾರಣಾಂತರಗಳಿಂದ ದೂರವಾಯಿತು. ಆದ್ದರಿಂದ ಕೊನೆಗೆ ಈ ಪ್ರೊಡಕ್ಷನ್ ಹೌಸ್ ಅನ್ನು ಅಮಲಾ ಒಬ್ಬರೇ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಈಚೆಗಷ್ಟೇ 'ಕಡವೆರ್' ಅನ್ನೋ ಸಿನಿಮಾವನ್ನು ಇದೇ ಬ್ಯಾನರ್ ಮೂಲಕ ಅಮಲಾ ಪೌಲ್ ನಿರ್ಮಿಸಿದ್ದಾರೆ. ಆದರೆ ಈ ಮಧ್ಯೆ ಭವ್ನಿಂದರ್ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಮಲಾಗೆ ಸಾಕಷ್ಟು ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಸಾಕಷ್ಟು ಹಣವನ್ನು ಲಪಟಾಯಿಸಿದ್ದಾರೆ ಎನ್ನಲಾಗುತ್ತಿದೆ. ಅದರ ಜೊತೆಗೆ ತಮಗೆ ಸಾಕಷ್ಟು ಬೆದರಿಕೆ ಹಾಕುತ್ತಿದ್ದು, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾನೆ ಎಂದು ಭವ್ನಿಂದರ್ ವಿರುದ್ಧ ಅಮಲಾ ಆರೋಪ ಮಾಡಿದ್ದಾರೆ.

ಅಲ್ಲದೆ, ಹಣಕ್ಕಾಗಿ ಭವ್ನಿಂದರ್ ಬೇಡಿಕೆ ಇಡುತ್ತಿದ್ದಾನೆ. ಹಣ ನೀಡದಿದ್ದರೆ ತನ್ನ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಅಮಲಾ ಪೌಲ್ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಭವ್ನಿಂದರ್ ಸಿಂಗ್ರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಂದಹಾಗೆ, ಬಹುಭಾಷಾ ನಟಿಯಾಗಿರುವ ಅಮಲಾ ಪೌಲ್, 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡಕ್ಕೂ ಎಂಟ್ರಿ ನೀಡಿದ್ದರು. ನಿರ್ದೇಶಕ ಎ.ಎಲ್. ವಿಜಯ್ ಜೊತೆಗೆ ಅಮಲಾ ಮದುವೆ ಆಗಿತ್ತು. ಆದರೆ ಕೆಲವೇ ವರ್ಷಗಳಲ್ಲಿ ಹೊಂದಾಣಿಕೆ ಕೊರತೆಯಿಂದ ವಿಜಯ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು ನಟಿ ಅಮಲಾ ಪೌಲ್. ಸದ್ಯ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಅಮಲಾ, ಈಗ ಮಾಹಿ ಸ್ನೇಹಿತನ ಕುತಂತ್ರದಿಂದಾಗಿ ಮತ್ತೆ ಸುದ್ದಿಯಲ್ಲಿದ್ದಾರೆ.
Cadaver Movie Actress Amala Paul Files Harassment Case Against Ex Friend Bhavninder Singh.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm