Cadaver Movie Actress Amala Paul Files Harassment Case Against Ex Friend Bhavninder Singh.
">ಬ್ರೇಕಿಂಗ್ ನ್ಯೂಸ್
01-09-22 02:08 pm Source: Vijayakarnataka ಸಿನಿಮಾ
ನಟಿ ಅಮಲಾ ಪೌಲ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಾರಣ, ಮಾಜಿ ಬಾಯ್ಫ್ರೆಂಡ್ ಭವಿಂದರ್ ಸಿಂಗ್! ಎಲ್ಲರಿಗೂ ಗೊತ್ತಿರುವಂತೆ ಭವ್ನಿಂದರ್ ಸಿಂಗ್ ಜೊತೆಗೆ ಅಮಲಾ ಸ್ನೇಹ ಬೆಳೆಸಿದ್ದರು. ಇಬ್ಬರು ಮದುವೆ ಕೂಡ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈ ಮಧ್ಯೆ ಇಬ್ಬರ ನಡುವಿನ ಸ್ನೇಹ ಹಳಸಿತು. ದೂರ ದೂರ ಆಗಿದ್ದ ಈ ಜೋಡಿ ಈಗ ಮತ್ತೆ ಸದ್ದು ಮಾಡುತ್ತಿದೆ. ಭವ್ನಿಂದರ್ ಸಿಂಗ್ ವಿರುದ್ಧ ಅಮಲಾ ದೂರು ನೀಡಿದ್ದಾರೆ!
ಭವಿಂದರ್ ವಿರುದ್ಧ ದೌರ್ಜನ್ಯ ಕೇಸ್
ಮಾಜಿ ಸ್ನೇಹಿತ ಭವ್ನಿಂದರ್ ವಿರುದ್ಧ ಅಮಲಾ ಪೌಲ್ ದೌರ್ಜನ್ಯ, ವಂಚನೆ ಕೇಸ್ ದಾಖಲಿಸಿದ್ದು, ಎಫ್ಐಆರ್ ಕೂಡ ದಾಖಲಾಗಿದೆ. ವಿಲ್ಲುಪುರಂ ಜಿಲ್ಲೆಯಲ್ಲಿ ಈ ಎಫ್ಐಆರ್ ದಾಖಲಾಗಿದ್ದು, ಅಮಲಾ ನೀಡಿದ ದೂರಿನ ಅನ್ವಯ ಭವ್ನಿಂದರ್ರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಏನಿದು ಪ್ರಕರಣ?
2018ರಲ್ಲಿ ಅಮಲಾ ಮತ್ತು ಭವ್ನಿಂದರ್ ಜಂಟಿಯಾಗಿ ಒಂದು ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದರು. ಆದರೆ ಈ ಜೋಡಿ ಕಾರಣಾಂತರಗಳಿಂದ ದೂರವಾಯಿತು. ಆದ್ದರಿಂದ ಕೊನೆಗೆ ಈ ಪ್ರೊಡಕ್ಷನ್ ಹೌಸ್ ಅನ್ನು ಅಮಲಾ ಒಬ್ಬರೇ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಈಚೆಗಷ್ಟೇ 'ಕಡವೆರ್' ಅನ್ನೋ ಸಿನಿಮಾವನ್ನು ಇದೇ ಬ್ಯಾನರ್ ಮೂಲಕ ಅಮಲಾ ಪೌಲ್ ನಿರ್ಮಿಸಿದ್ದಾರೆ. ಆದರೆ ಈ ಮಧ್ಯೆ ಭವ್ನಿಂದರ್ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಮಲಾಗೆ ಸಾಕಷ್ಟು ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಸಾಕಷ್ಟು ಹಣವನ್ನು ಲಪಟಾಯಿಸಿದ್ದಾರೆ ಎನ್ನಲಾಗುತ್ತಿದೆ. ಅದರ ಜೊತೆಗೆ ತಮಗೆ ಸಾಕಷ್ಟು ಬೆದರಿಕೆ ಹಾಕುತ್ತಿದ್ದು, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾನೆ ಎಂದು ಭವ್ನಿಂದರ್ ವಿರುದ್ಧ ಅಮಲಾ ಆರೋಪ ಮಾಡಿದ್ದಾರೆ.

ಅಲ್ಲದೆ, ಹಣಕ್ಕಾಗಿ ಭವ್ನಿಂದರ್ ಬೇಡಿಕೆ ಇಡುತ್ತಿದ್ದಾನೆ. ಹಣ ನೀಡದಿದ್ದರೆ ತನ್ನ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಅಮಲಾ ಪೌಲ್ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಭವ್ನಿಂದರ್ ಸಿಂಗ್ರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಂದಹಾಗೆ, ಬಹುಭಾಷಾ ನಟಿಯಾಗಿರುವ ಅಮಲಾ ಪೌಲ್, 'ಹೆಬ್ಬುಲಿ' ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡಕ್ಕೂ ಎಂಟ್ರಿ ನೀಡಿದ್ದರು. ನಿರ್ದೇಶಕ ಎ.ಎಲ್. ವಿಜಯ್ ಜೊತೆಗೆ ಅಮಲಾ ಮದುವೆ ಆಗಿತ್ತು. ಆದರೆ ಕೆಲವೇ ವರ್ಷಗಳಲ್ಲಿ ಹೊಂದಾಣಿಕೆ ಕೊರತೆಯಿಂದ ವಿಜಯ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು ನಟಿ ಅಮಲಾ ಪೌಲ್. ಸದ್ಯ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಅಮಲಾ, ಈಗ ಮಾಹಿ ಸ್ನೇಹಿತನ ಕುತಂತ್ರದಿಂದಾಗಿ ಮತ್ತೆ ಸುದ್ದಿಯಲ್ಲಿದ್ದಾರೆ.
Cadaver Movie Actress Amala Paul Files Harassment Case Against Ex Friend Bhavninder Singh.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm