ಬ್ರೇಕಿಂಗ್ ನ್ಯೂಸ್
05-09-22 01:34 pm Source: Vijayakarnataka ಸಿನಿಮಾ
ಕನ್ನಡ ಸಿನಿಮಾಗಳಿಗೆ ಇತ್ತೀಚೆಗೆ ಪರಭಾಷೆಗಳಲ್ಲಿ ಬೇಡಿಕೆ ಸೃಷ್ಟಿಯಾಗುತ್ತಿವೆ. ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಲವ್ 360’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಈಗ ಈ ಸಿನಿಮಾ ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗುತ್ತಿದೆ ಎಂದು ಸುದ್ದಿಯಾಗಿದೆ.
ಶಶಾಂಕ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಹೊಸತನದ ಕಥೆಯಿಂದ ಗಮನ ಸೆಳೆದಿತ್ತು. ಈ ಸಿನಿಮಾ ಮೂಲಕ ಪ್ರವೀಣ್ ಎಂಬ ಯುವಕ ನಾಯಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಸಿನಿಮಾವನ್ನು ಈಗ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮತ್ತು ನಿರ್ಮಾಪಕರು ರಿಮೇಕ್ ಮಾಡಲು ಆಸಕ್ತಿ ತೋರಿಸಿದ್ದಾರೆ. ಶಶಾಂಕ್ ಅವರಿಗೆ ನಿರ್ದೇಶನ ಮಾಡಲು ಆಫರ್ ಸಹ ನೀಡಿದ್ದಾರಂತೆ.

‘ಲವ್ 360 ಸಿನಿಮಾದ ಕಥೆ ಮತ್ತು ಮೇಕಿಂಗ್ ಅನ್ನು ಇಷ್ಟಪಟ್ಟು ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ರಿಮೇಕ್ ಮಾಡಲು ಮುಂದೆ ಬಂದಿದೆ. ತಮಿಳಿಗೂ ಸಹ ಒಂದಷ್ಟು ಮಂದಿ ಕೇಳಿದ್ದಾರೆ. ಸದ್ಯದಲ್ಲೇ ಎಲ್ಲವೂ ಫೈನಲ್ ಆಗಲಿದೆ’ಎಂದು ಹೇಳುತ್ತಾರೆ ಶಶಾಂಕ್.

ಜನ ಗೆಲ್ಲಿಸಿದ ಸಿನಿಮಾ ಈ ಸಿನಿಮಾ ಬಿಡುಗಡೆಯಾಗಿ ಮೊದಲ ಮೂರು ದಿನಗಳ ಕಾಲ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಲಿಲ್ಲ ಎಂದು ಶಶಾಂಕ್ ಬೇಸರದಿಂದ ವಿಡಿಯೊವೊಂದನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದರು. ಆ ವಿಡಿಯೊ ವೈರಲ್ ಆಗಿ ಸಿನಿಮಾಗೆ ಜನ ಬರಲಾರಂಭಿಸಿದರು. ವಿಶೇಷ ಎಂದರೆ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದ್ದಲ್ಲದೆ, ಜನಮನವನ್ನು ಸಹ ಗೆದ್ದಿತು. ಹಾಗಾಗಿ ಶಶಾಂಕ್ ಕನ್ನಡಿಗರಿಗೆ ಧನ್ಯವಾದ ಹೇಳಿ ಒಂದು ವಿಡಿಯೊವನ್ನು ಹರಿ ಬಿಟ್ಟಿದ್ದಾರೆ.

‘ಕನ್ನಡಿಗರು ಸಿನಿಮಾವನ್ನು ಗೆಲ್ಲಿಸಿದ್ದಾರೆ. ಒಳ್ಳೆಯ ಕಂಟೆಂಟ್ ಇರುವ ಸಿನಿಮಾಗಳನ್ನು ಮಾಡಿದರೆ ಎಂದಿಗೂ ಅವರು ಕೈ ಬಿಡುವುದಿಲ್ಲ ಎಂಬುದನ್ನು ನಿರೂಪಿಸಿದ್ದಾರೆ. ‘ಲವ್ 360’ ತಂಡದಿಂದ ಸಿನಿಮಾ ನೋಡಿದ ಎಲ್ಲರಿಗೂ ಧನ್ಯವಾದ. ಈ ಸಿನಿಮಾ ಹಿಟ್ ಆಗಲು ಹಲವು ಕಾರಣಗಳಿವೆ. ಸಿನಿಮಾದಲ್ಲಿನ ಹಾಡುಗಳು ಮತ್ತು ನನ್ನ ಕಥಾ ನಾಯಕ ಪ್ರವೀಣ್ ಮತ್ತು ನಾಯಕಿ ರಚನಾ ಇಂದರ್ ಅವರ ನಟನೆಯೂ ಕಾರಣ’ ಎಂದು ಹೇಳಿದ್ದಾರೆ ಶಶಾಂಕ್.ಒಟ್ಟಾರೆ ಕನ್ನಡಿಗರು ಇಷ್ಟಪಟ್ಟ ಸಿನಿಮಾಗಳು ಪರಭಾಷೆಗೂ ಹೋಗುತ್ತಿರುವುದು ಸಹಜವಾಗಿ ಕನ್ನಡ ಸಿನಿಮಾ ಪ್ರೇಮಿಗಳಿಗೆ ಸಂತಸವಾಗಿದೆ.
"ರಿಮೇಕ್ಗಾಗಿ ಬೇಡಿಕೆ ಬಂದಿದೆ. ಸದ್ಯದಲ್ಲೇ ಯಾರು ಮಾಡುತ್ತಾರೆ ಎಂಬ ಬಗ್ಗೆ ವಿವರ ನೀಡುತ್ತೇವೆ" ಎಂದಿದ್ದಾರೆ ನಿರ್ದೇಶಕ ಶಶಾಂಕ್
Demand For Director Shashank Love 360 Movie Remake
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm