ಬ್ರೇಕಿಂಗ್ ನ್ಯೂಸ್
09-09-22 03:58 pm Source: Vijayakarnataka ಸಿನಿಮಾ
ಸ್ಯಾಂಡಲ್ವುಡ್ನ ಬಹುಬೇಡಿಕೆಯ ನಟರಲ್ಲಿ 'ಡಾಲಿ' ಧನಂಜಯ್ ಕೂಡ ಒಬ್ಬರು. ಒಂದಾದ ಮೇಲೊಂದು ಸಿನಿಮಾ ಮಾಡುತ್ತ, ಸದಾ ಬ್ಯುಸಿ ಇರುವ ಧನಂಜಯ್ ಹಲವು ಸಿನಿಮಾಗಳ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಅವರ ಸಾಲು ಸಾಲು ಸಿನಿಮಾಗಳ ರಿಲೀಸ್ ಡೇಟ್ ಘೋಷಣೆ ಆಗುತ್ತಲೇ ಇದೆ. ಈ ಮಧ್ಯೆ ಧನಂಜಯ್ ನಟನೆಯ ಮತ್ತೊಂದು ಸಿನಿಮಾದ ರಿಲೀಸ್ ಡೇಟ್ ಘೋಷಣೆ ಆಗಿದೆ. ಹೌದು, ಧನು ಅವರ 'ಹೊಯ್ಸಳ' ಸಿನಿಮಾವು ಶ್ರೀರಾಮನವಮಿಯ (ಮಾರ್ಚ್ 30) ಶುಭದಿನದಂದು ತೆರೆಕಾಣಲಿದೆ.
'ಹೊಯ್ಸಳ' ಚಿತ್ರಕ್ಕೆ ಬಿರುಸಿನ ಚಿತ್ರೀಕರಣ
ಈ ಚಿತ್ರಕ್ಕೆ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಈಗ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಧನಂಜಯ ಈ ಚಿತ್ರದಲ್ಲಿ ಗುರುದೇವ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಧನಂಜಯ್ ನಾಯಕತ್ವದಲ್ಲಿ 'ರತ್ನನ್ ಪ್ರಪಂಚ' ಸಿನಿಮಾವನ್ನು ನಿರ್ಮಿಸಿದ್ದ ಕೆಆರ್ಜಿ ಸ್ಟುಡಿಯೋಸ್ ಈ ಸಿನಿಮಾವನ್ನು ಕೂಡ ನಿರ್ಮಾಣ ಮಾಡುತ್ತಿದೆ. 'ಹೊಯ್ಸಳ' ಚಿತ್ರವನ್ನು ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿದ್ದಾರೆ. ಈ ಹಿಂದೆ ಗಣೇಶ್ ಅಭಿನಯದ 'ಗೀತಾ' ಚಿತ್ರವನ್ನು ವಿಜಯ್ ನಾಗೇಂದ್ರ ಈಗ 'ಹೊಯ್ಸಳ' ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಜನೀಶ್ ಲೋಕನಾಥ್ ಆವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
ಧನಂಜಯ್ಗೆ ಅಮೃತಾ ಅಯ್ಯಂಗಾರ್ ನಾಯಕಿ
ಧನಂಜಯ್ ಜೊತೆಗೆ ಅಮೃತಾ ಅಯ್ಯಂಗಾರ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪಾಪ್ಕಾರ್ನ್ ಮಂಕಿ ಟೈಗರ್, ಬಡವ ರಾಸ್ಕಲ್ ನಂತರ ಮೂರನೇ ಬಾರಿಗೆ ಈ ಜೋಡಿ ಒಂದಾಗಿದೆ. ಉಳಿದಂತೆ, ಅಚ್ಯುತಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, 'ಕೆಜಿಎಫ್' ಖ್ಯಾತಿಯ ಅವಿನಾಶ್, ರಾಘು ಶಿವಮೊಗ್ಗ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. 'ಕೆಜಿಎಫ್', 'ಸಲಾರ್' ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. 'ಹೊಯ್ಸಳ' ಚಿತ್ರದ ಸಾಹಸ ಸನ್ನಿವೇಶಗಳನ್ನು ಸಾಹಸ ನಿರ್ದೇಶಕರಾದ ದಿಲೀಪ್ ಸುಬ್ರಹ್ಮಣ್ಯ ಹಾಗೂ ಅರ್ಜುನ್ ಮಾಸ್ಟರ್ ಸಂಯೋಜನೆ ಮಾಡಲಿದ್ದಾರೆ.
'ಡಾಲಿ' ಕೈಯಲ್ಲಿ ಹಲವು ಸಿನಿಮಾಗಳು
ಸದ್ಯ 'ಹೊಯ್ಸಳ' ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿ ಇರುವ ಧನಂಜಯ್, ಇದರ ಮಧ್ಯೆ ರಿಲೀಸ್ ಆಗುತ್ತಿರುವ ತಮ್ಮ ಸಿನಿಮಾಗಳ ಪ್ರಮೋಷನ್ ಕೂಡ ಮಾಡುತ್ತಿದ್ದಾರೆ. ಸೆ.16ರಂದು ಧನಂಜಯ್, ರಚಿತಾ ರಾಮ್ ನಟನೆಯ 'ಮಾನ್ಸೂನ್ ರಾಗ' ಸಿನಿಮಾವು ತೆರೆಗೆ ಬರುತ್ತಿದೆ. ಆನಂತರ ಸೆ.30ರಂದು ಜಗ್ಗೇಶ್ ಜೊತೆಗೆ ಧನಂಜಯ್ ನಟಿಸಿರವ 'ತೋತಾಪುರಿ' ಸಿನಿಮಾ ಕೂಡ ರಿಲೀಸ್ ಆಗಲಿದೆ. ಅಕ್ಟೋಬರ್ ಮೂರನೇ ವಾರದಲ್ಲಿ ಧನಂಜಯ್ ನಿರ್ಮಿಸಿ, ನಟಿಸಿರುವ 'ಹೆಡ್ ಬುಷ್' ಕೂಡ ಗ್ರ್ಯಾಂಡ್ ಆಗಿ ತೆರೆಕಾಣಲಿದೆ. ಇದರ ಜತೆಗೆ 'ಒನ್ಸ್ ಅಪನ್ ಎ ಟೈಮ್ ಇನ್ ಜಮಾಲಿಗುಡ್ಡ' ಸಿನಿಮಾ ಕೂಡ ರಿಲೀಸ್ ಆಗಲು ಸಜ್ಜಾಗಿದೆ. ಇಷ್ಟು ಸಿನಿಮಾಗಳ ಜೊತೆಗೆ ಪರಭಾಷೆಯಲ್ಲೂ ಧನಂಜಯ್ ಸಖತ್ ಬ್ಯುಸಿ ಇದ್ದಾರೆ.
Dhananjay Amrutha Iyengar Starrer Hoysala Movie Will Release On March 30th.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm