ಬ್ರೇಕಿಂಗ್ ನ್ಯೂಸ್
12-09-22 02:28 pm Source: Vijayakarnataka ಸಿನಿಮಾ
'ಸೂಪರ್ ಸ್ಟಾರ್' ರಜನಿಕಾಂತ್ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೌಂದರ್ಯಾ ಅವರಿಗೆ ಈಗಾಗಲೇ ವೇದ್ ಎಂಬ ಗಂಡು ಮಗನಿದ್ದಾನೆ. ಇದೀಗ ಎರಡನೇ ಮಗುವಿಗೆ ಜನ್ಮ ನೀಡಿರುವ ಸೌಂದರ್ಯಾ, ಮುದ್ದು ಮಗನಿಗೆ ಆಗಲೇ ನಾಮಕರಣವನ್ನೂ ಮಾಡಿದ್ದಾರೆ. ಹೌದು, ಮಗನಿಗೆ ವೀರ್ ರಜನಿಕಾಂತ್ ವನಂಗಮುಡಿ ಎಂದು ಹೆಸರಿಟ್ಟಿದ್ದಾರೆ.
'ದೇವರ ಮತ್ತು ಹೆತ್ತವರ ಆಶೀರ್ವಾದಿಂದ ವಿಶಾಗನ್, ವೇದ್ ಮತ್ತು ನಾನು ವೇದ್ನ ತಮ್ಮನನ್ನು ಸ್ವಾಗತಿಸಲು ಥ್ರಿಲ್ ಆಗಿದ್ದೇವೆ. ವೀರ್ ರಜನಿಕಾಂತ್ ವನಂಗಮುಡಿ...' ಎಂದು ಬರೆದುಕೊಂಡಿರುವ ಸೌಂದರ್ಯಾ ರಜನಿಕಾಂತ್ ಅವರು, ವೈದ್ಯರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಸೌಂದರ್ಯಾಗೆ ಇದು 2ನೇ ಮದುವೆ
2010 ಸೆಪ್ಟೆಂಬರ್ 3ರಂದು ಸೌಂದರ್ಯಾ ಹಾಗೂ ಅಶ್ವಿನ್ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದರು. ಏಳು ವರ್ಷ ಒಟ್ಟಿಗೆ ಇದ್ದ ಈ ಜೋಡಿ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ಇಬ್ಬರೂ ಪರಸ್ಪರ ಒಪ್ಪಿ ವಿಚ್ಛೇದನ ಪಡೆದುಕೊಂಡಿದ್ದರು. ನಂತರ 2019ರ ಫೆಬ್ರವರಿಯಲ್ಲಿ ನಟ ಹಾಗೂ ಉದ್ಯಮಿ ವಿಶಾಗನ್ ವನಂಗಮುಡಿಯೊಂದಿಗೆ ಸಪ್ತಪದಿ ತುಳಿದರು. ಚೆನ್ನೈನ ಎಂಆರ್ಸಿ ನಗರ್ನಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ನಡೆದಿದ್ದ ಅದ್ದೂರಿ ಮದುವೆ ಅನೇಕ ಗಣ್ಯರು ಆಗಮಿಸಿದ್ದರು.
ಇದೀಗ ಸೌಂದರ್ಯಾ ಮತ್ತು ವಿಶಾಗನ್ ದಂಪತಿ ಮುದ್ದಾದ ಗಂಡು ಮಗುವಿಗೆ ಪೋಷಕರಾಗಿದ್ದಾರೆ. ಆಗಸ್ಟ್ನಲ್ಲಿ ಸೌಂದಯಾಗೆ ಸೀಮಂತ ಕಾರ್ಯಕ್ರಮ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ರಜನಿಕಾಂತ್ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಮಾತ್ರ ಆಗಮಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಮಗುವಿನ ಮುಖವನ್ನು ತೋರಿಸದೆ ಮಗುವಿನ ಕೈ ಹಿಡಿದಿರುವಂತಹ ಕೆಲವು ಫೋಟೋಗಳನ್ನು ಮಾತ್ರ ಸೌಂದರ್ಯಾ ಹಂಚಿಕೊಂಡಿದ್ದಾರೆ. ಜೊತೆಗೆ ಪ್ರೆಗ್ನೆನ್ಸಿ ಫೋಟೋಶೂಟ್ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.
ಅಂದಹಾಗೆ, ಸೌಂದರ್ಯಾ ಅವರು ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ರಜನಿಕಾಂತ್ ಮತ್ತು ದೀಪಿಕಾ ಪಡುಕೋಣೆ ನಟನೆಯ 'ಕೊಚಾಡಿಯನ್' ಸಿನಿಮಾವನ್ನು ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದಲ್ಲಿ ಸೌಂದರ್ಯಾ ನಿರ್ದೇಶಿಸಿದ್ದರು. ಹಾಗೆಯೇ ಧನುಷ್ ಮತ್ತು ಕಾಜೋಲ್ ನಟಿಸಿದ್ದ 'ವಿಐಪಿ 2' ಸಿನಿಮಾವನ್ನು ಕೂಡ ಸೌಂದರ್ಯಾ ನಿರ್ದೇಶಿಸಿದ್ದರು.
Super Star Rajinikanths Daughter Soundarya Welcomes Baby Boy
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm