ಬ್ರೇಕಿಂಗ್ ನ್ಯೂಸ್
12-09-22 02:28 pm Source: Vijayakarnataka ಸಿನಿಮಾ
'ಸೂಪರ್ ಸ್ಟಾರ್' ರಜನಿಕಾಂತ್ ಕುಟುಂಬದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೌಂದರ್ಯಾ ಅವರಿಗೆ ಈಗಾಗಲೇ ವೇದ್ ಎಂಬ ಗಂಡು ಮಗನಿದ್ದಾನೆ. ಇದೀಗ ಎರಡನೇ ಮಗುವಿಗೆ ಜನ್ಮ ನೀಡಿರುವ ಸೌಂದರ್ಯಾ, ಮುದ್ದು ಮಗನಿಗೆ ಆಗಲೇ ನಾಮಕರಣವನ್ನೂ ಮಾಡಿದ್ದಾರೆ. ಹೌದು, ಮಗನಿಗೆ ವೀರ್ ರಜನಿಕಾಂತ್ ವನಂಗಮುಡಿ ಎಂದು ಹೆಸರಿಟ್ಟಿದ್ದಾರೆ.
'ದೇವರ ಮತ್ತು ಹೆತ್ತವರ ಆಶೀರ್ವಾದಿಂದ ವಿಶಾಗನ್, ವೇದ್ ಮತ್ತು ನಾನು ವೇದ್ನ ತಮ್ಮನನ್ನು ಸ್ವಾಗತಿಸಲು ಥ್ರಿಲ್ ಆಗಿದ್ದೇವೆ. ವೀರ್ ರಜನಿಕಾಂತ್ ವನಂಗಮುಡಿ...' ಎಂದು ಬರೆದುಕೊಂಡಿರುವ ಸೌಂದರ್ಯಾ ರಜನಿಕಾಂತ್ ಅವರು, ವೈದ್ಯರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
ಸೌಂದರ್ಯಾಗೆ ಇದು 2ನೇ ಮದುವೆ
2010 ಸೆಪ್ಟೆಂಬರ್ 3ರಂದು ಸೌಂದರ್ಯಾ ಹಾಗೂ ಅಶ್ವಿನ್ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದರು. ಏಳು ವರ್ಷ ಒಟ್ಟಿಗೆ ಇದ್ದ ಈ ಜೋಡಿ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ಇಬ್ಬರೂ ಪರಸ್ಪರ ಒಪ್ಪಿ ವಿಚ್ಛೇದನ ಪಡೆದುಕೊಂಡಿದ್ದರು. ನಂತರ 2019ರ ಫೆಬ್ರವರಿಯಲ್ಲಿ ನಟ ಹಾಗೂ ಉದ್ಯಮಿ ವಿಶಾಗನ್ ವನಂಗಮುಡಿಯೊಂದಿಗೆ ಸಪ್ತಪದಿ ತುಳಿದರು. ಚೆನ್ನೈನ ಎಂಆರ್ಸಿ ನಗರ್ನಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ನಡೆದಿದ್ದ ಅದ್ದೂರಿ ಮದುವೆ ಅನೇಕ ಗಣ್ಯರು ಆಗಮಿಸಿದ್ದರು.
ಇದೀಗ ಸೌಂದರ್ಯಾ ಮತ್ತು ವಿಶಾಗನ್ ದಂಪತಿ ಮುದ್ದಾದ ಗಂಡು ಮಗುವಿಗೆ ಪೋಷಕರಾಗಿದ್ದಾರೆ. ಆಗಸ್ಟ್ನಲ್ಲಿ ಸೌಂದಯಾಗೆ ಸೀಮಂತ ಕಾರ್ಯಕ್ರಮ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ರಜನಿಕಾಂತ್ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಮಾತ್ರ ಆಗಮಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಮಗುವಿನ ಮುಖವನ್ನು ತೋರಿಸದೆ ಮಗುವಿನ ಕೈ ಹಿಡಿದಿರುವಂತಹ ಕೆಲವು ಫೋಟೋಗಳನ್ನು ಮಾತ್ರ ಸೌಂದರ್ಯಾ ಹಂಚಿಕೊಂಡಿದ್ದಾರೆ. ಜೊತೆಗೆ ಪ್ರೆಗ್ನೆನ್ಸಿ ಫೋಟೋಶೂಟ್ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.
ಅಂದಹಾಗೆ, ಸೌಂದರ್ಯಾ ಅವರು ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ರಜನಿಕಾಂತ್ ಮತ್ತು ದೀಪಿಕಾ ಪಡುಕೋಣೆ ನಟನೆಯ 'ಕೊಚಾಡಿಯನ್' ಸಿನಿಮಾವನ್ನು ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದಲ್ಲಿ ಸೌಂದರ್ಯಾ ನಿರ್ದೇಶಿಸಿದ್ದರು. ಹಾಗೆಯೇ ಧನುಷ್ ಮತ್ತು ಕಾಜೋಲ್ ನಟಿಸಿದ್ದ 'ವಿಐಪಿ 2' ಸಿನಿಮಾವನ್ನು ಕೂಡ ಸೌಂದರ್ಯಾ ನಿರ್ದೇಶಿಸಿದ್ದರು.
Super Star Rajinikanths Daughter Soundarya Welcomes Baby Boy
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm