ಬ್ರೇಕಿಂಗ್ ನ್ಯೂಸ್
16-09-22 01:48 pm Source: Vijayakarnataka ಸಿನಿಮಾ
ಝೈದ್ ಖಾನ್ ( Ziad Khan ) ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಈಗಾಗಲೇ ನಾನಾ ದಿಕ್ಕುಗಳಿಂದ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಕುತೂಹಲ ಹುಟ್ಟು ಹಾಕಿದೆ. ಅದನ್ನೆಲ್ಲ ಮತ್ತಷ್ಟು ತೀವ್ರವಾಗಿಸಿದ ಕ್ರೆಡಿಟ್ ಸಲ್ಲುವುದು ಮುದ್ದಾಗಿ ಮೂಡಿಬಂದು, ಹಂತ ಹಂತವಾಗಿ ಬಿಡುಗಡೆಯಾದ ಹಾಡುಗಳಿಗೆ.
ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಮಾಯಗಂಗೆ ಎಂಬ ಹಾಡಿನ ಮೋಡಿಗೆ ಸಿಲುಕದವರೇ ಇಲ್ಲ. ಸಾಹಿತ್ಯ, ಸಂಗೀತ, ದೃಷ್ಯೀಕರಣ ಸೇರಿದಂತೆ ಎಲ್ಲದರಲ್ಲಿಯೂ ಸೈ ಅನ್ನಿಸಿಕೊಂಡಿದ ಮಾಯಗಂಗೆ ಈವತ್ತಿಗೂ ಟ್ರೆಂಡಿಂಗ್ನಲ್ಲಿದೆ. ಇದೇ ಹೊತ್ತಿನಲ್ಲೀಗ ಲಿರಿಕಲ್ ವೀಡಿಯೋ ಸಾಂಗ್ ಒಂದು ಬಿಡುಗಡೆಗೊಂಡಿದೆ.

‘ಎಲ್ಲ ಟ್ರೋಲು ಎಲ್ಲಾ ಟ್ರೋಲು, ಸಿಕ್ಕಾಪಟ್ಟೆ ಕೊಲೇಸ್ಟ್ರಾಲು’ ಅಂತ ಶುರುವಾಗೋ ಈ ಹಾಡಿಗೆ ಡಾ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ವಿಶೇಷವೆಂದರೆ, ಸಂಗೀತ ಸಂಯೋಜನೆ ಮಾಡಿರುವ ಅಜನೀಶ್ ಲೋಕನಾಥ್ ಅವರೇ ಈ ಹಾಡನ್ನು ಹಾಡಿದ್ದಾರೆ. ಸಾಮಾನ್ಯವಾಗಿ ಮೆಲೋಡಿ ಹಾಡುಗಳ ಮೂಲಕ ಗಮನ ಸೆಳೆಯುವ, ಅದಕ್ಕೆ ಪ್ರಸಿದ್ಧಿ ಪಡೆದುಕೊಂಡಿರುವವರು ನಾಗೇಂದ್ರ ಪ್ರಸಾದ್. ಅವರು ಆಗಾಗ ಟಪ್ಪಾಂಗುಚ್ಚಿ ಸಾಂಗಿಗೂ ಸೈ ಎಂಬುದನ್ನು ಸಾಬೀತುಪಡಿಸುತ್ತಿರುತ್ತಾರೆ. ಈ ಟ್ರೋಲ್ ಹಾಡಿನ ಮೂಲಕ ಅದು ಮತ್ತೊಮ್ಮೆ ಋಜುವಾತಾಗಿದೆ.

ವಿಸೇಷವಾಗಿ, ಈ ಹಾಡಿನಲ್ಲಿ ಝೈದ್ ಖಾನ್ ಮತ್ತೆ ಮಿಂಚಿದ್ದಾರೆ. ಆ ಮೂಲಕ ಮತ್ತಷ್ಟು ಭರವಸೆ ಮೂಡಿಸಿದ್ದಾರೆ. ಈ ಹಿಂದೆ ಮಾಯಗಂಗೆ ಹಾಡು ನೋಡಿದವರೆಲ್ಲರೂ ಝೈದ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಇದೀಗ ಸದರಿ ಟ್ರೋಲ್ ಸಾಂಗ್ ಕೂಡಾ ಅಂಥಾದ್ದೇ ಮೆಚ್ಚುಗೆಗೆ ಪಾತ್ರವಾಗಿದೆ. ಈ ಜಮಾನದ ಟ್ರೆಂಡ್ ಅನ್ನು ಸಾಹಿತ್ಯಕ್ಕೆ ಒಗ್ಗಿಸಿಕೊಂಡಿರುವ ಈ ಹಾಡೂ ಕೂಡಾ ಟ್ರೆಂಡ್ ಸೆಟ್ ಮಾಡೋದರಲ್ಲಿ ಯಾವ ಅನುಮಾನವೂ ಇಲ್ಲ.
ಬನಾರಸ್ ಏಕಕಾಲದಲ್ಲಿಯೇ ಐದು ಭಾಷೆಗಳಲ್ಲಿ ತಯಾರುಗೊಂಡಿರುವ ಪ್ಯಾನ್ ಇಂಡಿಯಾ ಚಿತ್ರ. ಇದನ್ನು ಬಲು ಪ್ರೀತಿಯಿಂದ ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ ಮಾಡಿದ್ದಾರೆ. ಕರಾವಳಿಯ ಹುಡುಗಿ ಸೋನಲ್ ಮಾಂಥೆರೋ ನಾಯಕಿಯಾಗಿ ಝೈದ್ ಖಾನ್ಗೆ ಸಾಥ್ ಕೊಟ್ಟಿದ್ದಾರೆ. ಸುಜಯ್ ಶಾಸ್ತ್ರಿ, ದೇವರಾಜ್, ಅಚ್ಯುತ್ ಕುಮಾರ್, ಸಪ್ನಾ ರಾಜ್, ಬರ್ಖತ್ ಅಲಿ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬನಾರಸ್ ಇದೇ ನವೆಂಬರ್ ನಾಲ್ಕನೇ ತಾರೀಖಿನಂದು ಬಿಡುಗಡೆಗೊಳ್ಳಲಿದೆ.
Zaid Khan Sonal Monteiro Starrer Banaras Movie Lyrical Song Release.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm