ಬ್ರೇಕಿಂಗ್ ನ್ಯೂಸ್
23-09-22 03:18 pm Source: Vijayakarnataka ಸಿನಿಮಾ
ನೀರ್ದೋಸೆ ಸಿನಿಮಾ ಯಶಸ್ಸಿನ ಬಳಿಕ ಜಗ್ಗೇಶ್ (Jaggesh) ಹಾಗೂ ವಿಜಯ ಪ್ರಸಾದ್ (Vijay Prasad) ಜೋಡಿ 'ತೋತಾಪುರಿ' ಸಿನಿಮಾ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ'ತೋತಾಪುರಿ' ಸಹ ಇದೆ. ಈ ಸಿನಿಮಾ ಕಾಮಿಡಿ ಜತೆಗೆ ಭರಪೂರ ಮನರಂಜನೆ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದರ ಎರಡೂ ಭಾಗದ ಚಿತ್ರೀಕರಣವನ್ನು ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿರುವುದು ವಿಶೇಷ.ಚಾಪ್ಟರ್ 1 ಹಾಗೂ ಚಾಪ್ಟರ್ 2 ರೂಪದಲ್ಲಿ ರಿಲೀಸ್ ಆಗಲಿರುವ 'ತೋತಾಪುರಿ' ಸಿನಿಮಾದ ಮೊದಲ ಚಾಪ್ಟರ್ ಸೆಪ್ಟೆಂಬರ್ 30ರಂದು ವಿಶ್ವದಾದ್ಯಂತ ತೆರೆಕಾಣಲಿದೆ.
200 ಮಿಲಿಯನ್ ಮಹೋತ್ಸವ
'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್...' ಹಾಡು ವಿಶ್ವದಾದ್ಯಂತ ಸದ್ದು ಮಾಡಿದ್ದು ಗೊತ್ತೇ ಇದೆ. ದೊಡ್ಡವರಿಂದ ಚಿಕ್ಕವರವರೆಗೂ, ದೇಶ - ವಿದೇಶದವರೂ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಿಂದ ಹಿಡಿದು ಯಾವುದೇ ಸಮಾರಂಭ, ಮನೆ, ಕಾರು, ಕಚೇರಿ ಮೊದಲಾದ ಕಡೆಯೂ 'ತೋತಾಪುರಿ' ಹಾಡಿನದ್ದೇ ಕಲರವ. ಹಾಡನ್ನು ರೀ ಕ್ರಿಯೇಟ್ ಮಾಡಿದವರೆಷ್ಟೋ? ರೀಲ್ಸ್, ಡಾನ್ಸ್ ಮಾಡಿದವರು ಸಾವಿರಾರು ಮಂದಿ. ಇವೆಲ್ಲದರ ಜತೆಗೆ 'ಬಾಗ್ಲು ತೆಗಿ ಮೇರಿ ಜಾನ್' 200 ಮಿಲಿಯನ್ ಹಿಟ್ಸ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವಿಜಯ ಪ್ರಸಾದ್ ಸಾಹಿತ್ಯ ರಚಿಸಿದ್ದು, ವ್ಯಾಸರಾಜ್ ಸೋಸಲೆ ಹಾಗೂ ಅನನ್ಯಾ ಭಟ್ ದನಿಗೂಡಿಸಿದ್ದಾರೆ.

ತೋತಾಪುರಿ ತಾರಾಗಣದ ದಾಖಲೆ
'ತೋತಾಪುರಿ' ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್ ಮಾಡಿರುವುದು ಇದೇ ಮೊದಲು ಎಂಬುದು ಚಿತ್ರತಂಡದ ಅಭಿಪ್ರಾಯ. ಜಗ್ಗೇಶ್ ನಟಿಸಿರುವ ಸಿನಿಮಾಗಳ ಪೈಕಿ 'ತೋತಾಪುರಿ' ಬಿಗ್ ಬಜೆಟ್ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಡಾಲಿ ಧನಂಜಯ, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ, ಹೇಮಾ ದತ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿದ್ದಾರೆ.
'ತೋತಾಪುರಿ' ವಿಶೇಷ ಕಥೆ ಇರುವ ಮನರಂಜನಾತ್ಮಕ ಸಿನಿಮಾ. ಇದರಲ್ಲಿ ಹಾಸ್ಯದ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಪ್ರಚಲಿತ ಘಟನೆಗಳು ಇವೆ ಎಂಬುದು ನೋಡಿದವರಿಗೆ ತಿಳಿಯುತ್ತದೆ ಎಂದು ನಿರ್ದೇಶಕ ವಿಜಯ ಪ್ರಸಾದ್ ತಿಳಿಸಿದ್ದಾರೆ.
Jaggesh Starrer Totapuri To Release On September 30.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm