ಬ್ರೇಕಿಂಗ್ ನ್ಯೂಸ್
23-09-22 03:18 pm Source: Vijayakarnataka ಸಿನಿಮಾ
ನೀರ್ದೋಸೆ ಸಿನಿಮಾ ಯಶಸ್ಸಿನ ಬಳಿಕ ಜಗ್ಗೇಶ್ (Jaggesh) ಹಾಗೂ ವಿಜಯ ಪ್ರಸಾದ್ (Vijay Prasad) ಜೋಡಿ 'ತೋತಾಪುರಿ' ಸಿನಿಮಾ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ'ತೋತಾಪುರಿ' ಸಹ ಇದೆ. ಈ ಸಿನಿಮಾ ಕಾಮಿಡಿ ಜತೆಗೆ ಭರಪೂರ ಮನರಂಜನೆ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದರ ಎರಡೂ ಭಾಗದ ಚಿತ್ರೀಕರಣವನ್ನು ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿರುವುದು ವಿಶೇಷ.ಚಾಪ್ಟರ್ 1 ಹಾಗೂ ಚಾಪ್ಟರ್ 2 ರೂಪದಲ್ಲಿ ರಿಲೀಸ್ ಆಗಲಿರುವ 'ತೋತಾಪುರಿ' ಸಿನಿಮಾದ ಮೊದಲ ಚಾಪ್ಟರ್ ಸೆಪ್ಟೆಂಬರ್ 30ರಂದು ವಿಶ್ವದಾದ್ಯಂತ ತೆರೆಕಾಣಲಿದೆ.
200 ಮಿಲಿಯನ್ ಮಹೋತ್ಸವ
'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್...' ಹಾಡು ವಿಶ್ವದಾದ್ಯಂತ ಸದ್ದು ಮಾಡಿದ್ದು ಗೊತ್ತೇ ಇದೆ. ದೊಡ್ಡವರಿಂದ ಚಿಕ್ಕವರವರೆಗೂ, ದೇಶ - ವಿದೇಶದವರೂ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಿಂದ ಹಿಡಿದು ಯಾವುದೇ ಸಮಾರಂಭ, ಮನೆ, ಕಾರು, ಕಚೇರಿ ಮೊದಲಾದ ಕಡೆಯೂ 'ತೋತಾಪುರಿ' ಹಾಡಿನದ್ದೇ ಕಲರವ. ಹಾಡನ್ನು ರೀ ಕ್ರಿಯೇಟ್ ಮಾಡಿದವರೆಷ್ಟೋ? ರೀಲ್ಸ್, ಡಾನ್ಸ್ ಮಾಡಿದವರು ಸಾವಿರಾರು ಮಂದಿ. ಇವೆಲ್ಲದರ ಜತೆಗೆ 'ಬಾಗ್ಲು ತೆಗಿ ಮೇರಿ ಜಾನ್' 200 ಮಿಲಿಯನ್ ಹಿಟ್ಸ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವಿಜಯ ಪ್ರಸಾದ್ ಸಾಹಿತ್ಯ ರಚಿಸಿದ್ದು, ವ್ಯಾಸರಾಜ್ ಸೋಸಲೆ ಹಾಗೂ ಅನನ್ಯಾ ಭಟ್ ದನಿಗೂಡಿಸಿದ್ದಾರೆ.

ತೋತಾಪುರಿ ತಾರಾಗಣದ ದಾಖಲೆ
'ತೋತಾಪುರಿ' ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್ ಮಾಡಿರುವುದು ಇದೇ ಮೊದಲು ಎಂಬುದು ಚಿತ್ರತಂಡದ ಅಭಿಪ್ರಾಯ. ಜಗ್ಗೇಶ್ ನಟಿಸಿರುವ ಸಿನಿಮಾಗಳ ಪೈಕಿ 'ತೋತಾಪುರಿ' ಬಿಗ್ ಬಜೆಟ್ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಡಾಲಿ ಧನಂಜಯ, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ, ಹೇಮಾ ದತ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿದ್ದಾರೆ.
'ತೋತಾಪುರಿ' ವಿಶೇಷ ಕಥೆ ಇರುವ ಮನರಂಜನಾತ್ಮಕ ಸಿನಿಮಾ. ಇದರಲ್ಲಿ ಹಾಸ್ಯದ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಪ್ರಚಲಿತ ಘಟನೆಗಳು ಇವೆ ಎಂಬುದು ನೋಡಿದವರಿಗೆ ತಿಳಿಯುತ್ತದೆ ಎಂದು ನಿರ್ದೇಶಕ ವಿಜಯ ಪ್ರಸಾದ್ ತಿಳಿಸಿದ್ದಾರೆ.
Jaggesh Starrer Totapuri To Release On September 30.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm