ಬ್ರೇಕಿಂಗ್ ನ್ಯೂಸ್
23-09-22 03:18 pm Source: Vijayakarnataka ಸಿನಿಮಾ
ನೀರ್ದೋಸೆ ಸಿನಿಮಾ ಯಶಸ್ಸಿನ ಬಳಿಕ ಜಗ್ಗೇಶ್ (Jaggesh) ಹಾಗೂ ವಿಜಯ ಪ್ರಸಾದ್ (Vijay Prasad) ಜೋಡಿ 'ತೋತಾಪುರಿ' ಸಿನಿಮಾ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ'ತೋತಾಪುರಿ' ಸಹ ಇದೆ. ಈ ಸಿನಿಮಾ ಕಾಮಿಡಿ ಜತೆಗೆ ಭರಪೂರ ಮನರಂಜನೆ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದರ ಎರಡೂ ಭಾಗದ ಚಿತ್ರೀಕರಣವನ್ನು ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿರುವುದು ವಿಶೇಷ.ಚಾಪ್ಟರ್ 1 ಹಾಗೂ ಚಾಪ್ಟರ್ 2 ರೂಪದಲ್ಲಿ ರಿಲೀಸ್ ಆಗಲಿರುವ 'ತೋತಾಪುರಿ' ಸಿನಿಮಾದ ಮೊದಲ ಚಾಪ್ಟರ್ ಸೆಪ್ಟೆಂಬರ್ 30ರಂದು ವಿಶ್ವದಾದ್ಯಂತ ತೆರೆಕಾಣಲಿದೆ.
200 ಮಿಲಿಯನ್ ಮಹೋತ್ಸವ
'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್...' ಹಾಡು ವಿಶ್ವದಾದ್ಯಂತ ಸದ್ದು ಮಾಡಿದ್ದು ಗೊತ್ತೇ ಇದೆ. ದೊಡ್ಡವರಿಂದ ಚಿಕ್ಕವರವರೆಗೂ, ದೇಶ - ವಿದೇಶದವರೂ ಈ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಿಂದ ಹಿಡಿದು ಯಾವುದೇ ಸಮಾರಂಭ, ಮನೆ, ಕಾರು, ಕಚೇರಿ ಮೊದಲಾದ ಕಡೆಯೂ 'ತೋತಾಪುರಿ' ಹಾಡಿನದ್ದೇ ಕಲರವ. ಹಾಡನ್ನು ರೀ ಕ್ರಿಯೇಟ್ ಮಾಡಿದವರೆಷ್ಟೋ? ರೀಲ್ಸ್, ಡಾನ್ಸ್ ಮಾಡಿದವರು ಸಾವಿರಾರು ಮಂದಿ. ಇವೆಲ್ಲದರ ಜತೆಗೆ 'ಬಾಗ್ಲು ತೆಗಿ ಮೇರಿ ಜಾನ್' 200 ಮಿಲಿಯನ್ ಹಿಟ್ಸ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವಿಜಯ ಪ್ರಸಾದ್ ಸಾಹಿತ್ಯ ರಚಿಸಿದ್ದು, ವ್ಯಾಸರಾಜ್ ಸೋಸಲೆ ಹಾಗೂ ಅನನ್ಯಾ ಭಟ್ ದನಿಗೂಡಿಸಿದ್ದಾರೆ.

ತೋತಾಪುರಿ ತಾರಾಗಣದ ದಾಖಲೆ
'ತೋತಾಪುರಿ' ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗಿದ್ದು, ನೂರಾರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕಾಮಿಡಿ ಸಿನಿಮಾವೊಂದಕ್ಕೆ ಈ ಪರಿ ಶೂಟಿಂಗ್ ಮಾಡಿರುವುದು ಇದೇ ಮೊದಲು ಎಂಬುದು ಚಿತ್ರತಂಡದ ಅಭಿಪ್ರಾಯ. ಜಗ್ಗೇಶ್ ನಟಿಸಿರುವ ಸಿನಿಮಾಗಳ ಪೈಕಿ 'ತೋತಾಪುರಿ' ಬಿಗ್ ಬಜೆಟ್ ಸಿನಿಮಾ ಎಂಬುದು ಗಮನಾರ್ಹ. ಹಾಗೆಯೇ ಚಿತ್ರದಲ್ಲಿ ಡಾಲಿ ಧನಂಜಯ, ಅದಿತಿ ಪ್ರಭುದೇವ, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ, ಹೇಮಾ ದತ್ ಸೇರಿದಂತೆ ಅನೇಕ ಕಲಾವಿದರು ತಾರಾಗಣದಲ್ಲಿದ್ದಾರೆ.
'ತೋತಾಪುರಿ' ವಿಶೇಷ ಕಥೆ ಇರುವ ಮನರಂಜನಾತ್ಮಕ ಸಿನಿಮಾ. ಇದರಲ್ಲಿ ಹಾಸ್ಯದ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಪ್ರಚಲಿತ ಘಟನೆಗಳು ಇವೆ ಎಂಬುದು ನೋಡಿದವರಿಗೆ ತಿಳಿಯುತ್ತದೆ ಎಂದು ನಿರ್ದೇಶಕ ವಿಜಯ ಪ್ರಸಾದ್ ತಿಳಿಸಿದ್ದಾರೆ.
Jaggesh Starrer Totapuri To Release On September 30.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm