ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.

ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.

ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm