ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.
ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.
ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm