ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.

ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.

ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm