ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.

ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.

ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm