ಬ್ರೇಕಿಂಗ್ ನ್ಯೂಸ್
28-09-22 01:27 pm Source: Vijayakarnataka ಸಿನಿಮಾ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ಗೆ ಎಂಟ್ರಿ ನೀಡಿರುವುದು ಗೊತ್ತೇ ಇದೆ. ಕಿರೀಟಿ ಹೀರೋ ಆಗಿರುವ ಈ ದ್ವಿಭಾಷಾ ಸಿನಿಮಾವನ್ನು 'ಮಯಾಬಜಾರ್' ಸಿನಿಮಾ ಖ್ಯಾತಿಯ ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಶುರುವಾಗಿ 5-6 ತಿಂಗಳು ಕಳೆದರೂ, ಈ ಚಿತ್ರದ ಟೈಟಲ್ ಏನು ಅನ್ನೋದು ಮಾತ್ರ ಯಾರಿಗೂ ಬಹಿರಂಗಗೊಂಡಿರಲಿಲ್ಲ. ಪ್ರೊಡಕ್ಷನ್ ನಂ.15 ಎಂದು ತಾತ್ಕಾಲಿಕ ಟೈಟಲ್ನಲ್ಲಿ ಚಿತ್ರದ ಕೆಲಸಗಳು ಸಾಗಿದ್ದವು. ಇದೀಗ ಚಿತ್ರದ ಟೈಟಲ್ ಲಾಂಚ್ ಮಾಡುವ ಸಮಯ ಬಂದಿದೆ. ಹೌದು, ಇದೇ ಸೆ.29ರಂದು ಕಿರೀಟಿ ಹುಟ್ಟುಹಬ್ಬ. ಆ ಸಲುವಾಗಿ, ಅಂದೇ ಟೈಟಲ್ ಲಾಂಚ್ ಮಾಡೋಕೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.
ಸೆ.29ರ ಸಂಹೆ 6.39ಕ್ಕೆ ಚಿತ್ರದ ಟೈಟಲ್ ಲಾಂಚ್ ವಿಡಿಯೋವನ್ನು ರಿಲೀಸ್ ಮಾಡಲು ಚಿತ್ರತಂಡ ರೆಡಿ ಆಗಿದೆ. ಆ ಮೂಲಕ ಇಷ್ಟು ದಿನಗಳವರೆಗೂ ಇದ್ದ ಕುತೂಹಲಕ್ಕೆ ತೆರೆಬೀಳಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಎರಡೂ ಭಾಷೆಗೆ ಹೊಂದಿಕೆ ಆಗುವಂತಹ ಶೀರ್ಷಿಕೆ ಇರಲಿದೆಯೇ ಎಂಬ ಪ್ರಶ್ನೆ ಸದ್ಯ ಎಲ್ಲರಲ್ಲೂ ಇದೆ.
ತೆಲುಗಿನಲ್ಲಿ 'ಈಗ', 'ಲೆಜೆಂಡ್', 'ಯುದ್ಧಂ ಶರಣಂ' ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಾಯಿ ಕೊರ್ರಪಾಟಿ (Sai Korrapati) ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ವರಾಹಿ ಬ್ಯಾನರ್ನ 15ನೇ ಸಿನಿಮಾ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಈ ಸಿನಿಮಾ ತೆರೆಗೆ ಬರಲಿದ್ದು, ಬಿಗ್ ಬಜೆಟ್ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ತೆಲುಗಿನ ದೊಡ್ಡ ದೊಡ್ಡ ತಂತ್ರಜ್ಞರೇ ಈ ಸಿನಿಮಾಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಿಗ್ ಪ್ರಾಜೆಕ್ಟ್ಗೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್ಆರ್ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಸೆಂಥಿಲ್ಕುಮಾರ್ ಕೆಲಸ ಮಾಡಲಿದ್ದಾರೆ. 'ಮಗಧೀರ', 'ಈಗ', 'ಊಸರವಳ್ಳಿ' ಮುಂತಾದ ಸೂಪರ್ ಹಿಟ್ ತೆಲುಗು ಸಿನಿಮಾಗಳಿಗೆ ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸದ್ಯ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ಎನಿಸಿಕೊಂಡಿರುವ ದೇವಿಶ್ರೀ ಪ್ರಸಾದ್ (Devi Sri Prasad) ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ಇನ್ನು ಭಾರತದ ಬಹುಬೇಡಿಕೆಯ ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅವರು 'ರನ್ನ', 'ನಟಸಾರ್ವಭೌಮ', 'ಸತ್ಯ ಇನ್ ಲವ್' ಸಿನಿಮಾಗಳಿಗೆ ಅವರು ಫೈಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದರು.
ಮುಖ್ಯಪಾತ್ರದಲ್ಲಿ ರವಿಚಂದ್ರನ್
ಕಿರೀಟಿಗೆ ನಾಯಕಿಯಾಗಿ ಈ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದು, 'ಕ್ರೇಜಿ ಸ್ಟಾರ್' ರವಿಚಂದ್ರನ್ ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. 'ಸತ್ಯ ಇನ್ ಲವ್' ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಒಂದು ಕಾಲದ ಸ್ಟಾರ್ ನಟಿ ಜೆನಿಲಿಯಾ, ಇದೀಗ ಈ ಕಿರೀಟಿ ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೆ ಮರಳಿದ್ದಾರೆ. ಉಳಿದಂತೆ ಯಾರೆಲ್ಲ ಇದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.
Janardhana Reddys Son Kireeti And Sreeleela Starrer New Movie Title Will Be Revealed On September 29th.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm