ಬ್ರೇಕಿಂಗ್ ನ್ಯೂಸ್
06-10-22 12:48 pm Source: Vijayakarnataka ಸಿನಿಮಾ
ಚಿತ್ರರಂಗದಲ್ಲಿ ಸಕ್ರಿಯರಾಗಿರುವಷ್ಟು ದಿನ ಸ್ಟಾರ್ ನಟಿಯಾಗಿದ್ದ ರಮ್ಯಾ ರಾಜಕೀಯಕ್ಕೆ ಹೋಗಿ ಕಲಾ ಪ್ರಪಂಚದಿಂದ ಕೊಂಚ ದೂರವಾಗಿದ್ದರು. ಕೆಲ ದಿನಗಳ ಹಿಂದೆಯಷ್ಟೇ ನಿರ್ಮಾಣ ಸಂಸ್ಥೆ ಆರಂಭಿಸಿ ಮತ್ತೆ ಸಕ್ರಿಯರಾಗಿರುವುದಾಗಿ ಹೇಳಿಕೊಂಡಿದ್ದರು. ಈಗ ಅವರ ಬ್ಯಾನರ್ನಿಂದ ಸಿನಿಮಾ ಅನೌನ್ಸ್ ಆಗಿದ್ದು, ಅದರಲ್ಲಿ ರಮ್ಯಾ ಅವರೇ ಮುಖ್ಯ ಪಾತ್ರದಲ್ಲಿನಟಿಸಲಿದ್ದಾರೆ.
ಹೌದು, ರಮ್ಯಾ ಯಾವಾಗ ನಟಿಸುತ್ತಾರೆ ಎಂದು ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳುತ್ತಲೇ ಇದ್ದರು. ಅದಕ್ಕೆ ರಮ್ಯಾ ವಿಜಯ ದಶಮಿಯಂದು ಉತ್ತರ ನೀಡಿದ್ದು, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಿ ನಾಯಕರಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಲವಲವಿಕೆ ಜತೆ ಮಾತನಾಡಿರುವ ರಮ್ಯಾ ಒಂದೊಳ್ಳೆ ಕಥೆಯ ಜತೆ ಚಿತ್ರರಂಗಕ್ಕೆ ವಾಪಾಸ್ಸಾಗುತ್ತಿರುವ ಬಗ್ಗೆ ಸಂತೋಷವಿದೆ ಎಂದಿದ್ದಾರೆ.

‘ನಾನು ರಾಜಕೀಯದಲ್ಲಿರುವಾಗಲೇ 'ಕೆಜಿಎಫ್', 'ದ್ವಿತ್ವ' ಹೀಗೆ ಹಲವು ಸಿನಿಮಾಗಳ ಆಫರ್ ಬಂದಿತ್ತು. 'ದ್ವಿತ್ವ' ಸಿನಿಮಾದ ಕಥೆಯನ್ನು ಕೇಳಿ ಇಷ್ಟಪಟ್ಟಿದ್ದೆ. ಆದರೆ ನಾನು ಮತ್ತು ಅಪ್ಪು ಇಬ್ಬರೂ ಒಟ್ಟಿಗೆ ತೆರೆ ಮೇಲೆ ಬರುತ್ತಿದ್ದೇವೆ ಎಂದಾಗ ಜನ ಬೇರೆ ರೀತಿಯ ಕಥೆಯನ್ನು ನಿರೀಕ್ಷೆ ಮಾಡುತ್ತಾರೆ ಎಂದು ಅದರಲ್ಲಿಯೂ ನಟಿಸಲಿಲ್ಲ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಬಿಡುಗಡೆಯಾದ ಮೇಲೆ ರಾಜ್ ಅವರಿಗೆ ಕಂಗ್ರಾಟ್ಸ್ ಹೇಳಲು ಕಾಲ್ ಮಾಡಿದೆ. ಆಗ ಅವರು ನಾನು ನಿಮ್ಮ ಅಭಿಮಾನಿ ಎಂದು ಹೇಳಿದ್ದರು. ನನ್ನ ಬಳಿ ಒಂದು ಕಥೆ ಇದ್ದು, ಅದು ನಿಮಗೆ ಸೂಕ್ತವಾಗಿದೆ ಎಂದರು. ಆಗ ನಾನು ಮುಂದಿನ ದಿನಗಳಲ್ಲಿ ಕೇಳುತ್ತೇನೆ ಎಂದಿದ್ದೆ. ನಂತರ ನಾನು ಚಿತ್ರರಂಗಕ್ಕೆ ವಾಪಾಸ್ ಬರಬೇಕು ಎಂದುಕೊಂಡಾಗ ಒಂದಷ್ಟು ಕಥೆ ಕೇಳಿದೆ. ಜತೆಗೆ ರಾಜ್ ಅವರ ಕಥೆಯನ್ನು ಸಹ ಕೇಳಿ ಖುಷಿಯಾಯಿತು. ಉತ್ತಮ ಕಥೆ ಮಾಡಿಕೊಂಡಿದ್ದರು. ಅದರಲ್ಲಿ ನಾಯಕಿಗೆ ಪ್ರಮುಖ ಪಾತ್ರವನ್ನು ನೀಡಿದ್ದಾರೆ. ರಾಜ್ ಅವರ ಪಾತ್ರವೂ ಚೆನ್ನಾಗಿದೆ ಹೀಗೆ ಈ ಸಿನಿಮಾ ಆರಂಭವಾಯಿತು' ಎಂದು ಹೇಳಿದ್ದಾರೆ ರಮ್ಯಾ.

'ಈ ಸಿನಿಮಾಗೆ ಸ್ವಾತಿ ಮುತ್ತಿನ ಮಳೆ ಹನಿಯೇ ಎಂಬ ಟೈಟಲ್ ಅನ್ನು ಸಹ ರಾಜ್ ಅವರೇ ಹುಡುಕಿಕೊಟ್ಟಿದ್ದಾರೆ. ವಿಭಿನ್ನ ಶೈಲಿಯ ಕಥಾ ನಿರೂಪಣೆ ಚಿತ್ರದಲ್ಲಿದೆ. ಇದೊಂದು ಸುಂದರವಾದ ಪ್ರೇಮ ಕಥೆಯಾಗಿದ್ದು, ಜತೆಗೆ ಮಹಿಳಾ ಪಾತ್ರದ ಮೂಲಕ ಒಂದಷ್ಟು ವಿಷಯಗಳನ್ನು ಹೇಳುತ್ತಿದ್ದೇವೆ. ಸಿನಿಮಾಟೋಗ್ರಫಿ, ಸಂಗೀತ ಹೀಗೆ ಎಲ್ಲವೂ ಬೇರೆ ರೀತಿಯಲ್ಲಿರುತ್ತದೆ. ಒಂದೊಳ್ಳೆ ಕಥೆಯ ಮೂಲಕ ನಾನು ನಟನೆಗೆ ವಾಪಾಸಾಗುತ್ತಿರುವುದು ಖುಷಿಯ ವಿಚಾರ’ ಎನ್ನುತ್ತಾರೆ ರಮ್ಯಾ. ಅಕ್ಟೋಬರ್ನಿಂದ ಈ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು, ಸದ್ಯಕ್ಕೆ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ.
'ನನ್ನ ಬ್ಯಾನರ್ನಲ್ಲಿ ಸ್ಪೋರ್ಟ್ಸ್ ಡ್ರಾಮಾ ಮತ್ತು ಇನ್ನೊಂದು ವಿಶೇಷ ಸಿನಿಮಾವನ್ನು ನಿರ್ಮಾಣ ಮಾಡುತ್ತೇನೆ. ದೊಡ್ಡ ದೊಡ್ಡ ಬ್ಯಾನರ್ಗಳಲ್ಲಿ ನಟನೆ ಮಾಡುತ್ತೇನೆ. ಸದ್ಯದಲ್ಲೇ ಅವೆಲ್ಲಾ ರಿವೀಲ್ ಆಗಲಿವೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಮೂಲಕ ಹೊಸ ರೀತಿಯ ಕಥೆಯನ್ನು ತೆರೆ ಮೇಲೆ ಹೇಳುತ್ತಿದ್ದೇವೆ. ಬಹಳ ಖುಷಿಯಿಂದ ಈ ಸಿನಿಮಾವನ್ನು ನಿರ್ಮಾಣ ಮಾಡಿ ನಟಿಸುತ್ತಿದ್ದೇನೆ. ನನ್ನ ಹಿಂದಿನ ಸಿನಿಮಾಗಳ ಎಲ್ಲಾ ಪಾತ್ರಕ್ಕಿಂತಲೂ ಈ ಸಿನಿಮಾದ ಪಾತ್ರ ಕೊಂಚ ವಿಭಿನ್ನವಾಗಿದೆ. ಮಹಿಳೆಯರ ಬಗ್ಗೆ ವಿಶೇಷವಾದ ವಿಷಯಗಳನ್ನು ಹೇಳುತ್ತಿದ್ದೇವೆ' ಎನ್ನುತ್ತಾರೆ ರಮ್ಯಾ.
Actress Ramya Speaks About Raj B Shettys Swathi Mutthina Male Haniye Movie.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm