ಬ್ರೇಕಿಂಗ್ ನ್ಯೂಸ್
10-10-22 02:29 pm Source: Vijayakarnataka ಸಿನಿಮಾ
'ಕೆಜಿಎಫ್' ಸಿನಿಮಾ ನಂತರದಲ್ಲಿ ಪರಭಾಷೆಯ ಚಿತ್ರರಂಗವು ಕನ್ನಡದತ್ತ ತಿರುಗಿ ನೋಡಲು ಶುರುಮಾಡಿತು. ಈಗಂತೂ ಒಂದಾದ ಮೇಲೆ ಒಂದರಂತೆ ಕಂಟೆಂಟ್ ಆಧಾರಿತ ಚಿತ್ರಗಳು ಬರಲು ಆರಂಭಿಸಿವೆ. ಕರ್ನಾಟಕ ನೆಲದಲ್ಲಿ ಬೆಂಗಳೂರಿನಲ್ಲಿ ನಡೆದ ಫಿಲ್ಮ್ಫೇರ್ ಪ್ರಶಸ್ತಿ ಸಮಾರಂಭದಲ್ಲಿ ( 67th Parle Filmfare Awards South 2022 ) ಕನ್ನಡ ಚಿತ್ರರಂಗದ ಬಗ್ಗೆ ತೆಲುಗು ನಟ ನಾನಿ ( Nani ) ಮಾತನಾಡಿದ್ದಾರೆ.
ನಾನಿ ಕನ್ನಡ ಚಿತ್ರರಂಗದ ಬಗ್ಗೆ ಆಡಿರುವ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಹಾಗಾದರೆ ನಾನಿ ಏನು ಮಾತನಾಡಿಬರಬಹುದು ಎಂಬ ಕುತೂಹಲ ಕೆಲವರಿಗೆ ಇರಬಹುದು
"ಯಪ್ಪಾ.. ಕನ್ನಡದಲ್ಲಿ ಈಗೀಗ ಏನು ಸಿನಿಮಾ ತೆಗಿತಿದ್ದೀರಪ್ಪ.. ಕನ್ನಡ ಚಿತ್ರರಂಗದ ಬಗ್ಗೆ ಇಡೀ ಭಾರತ ಮಾತನಾಡುತ್ತಿದೆ. ಇತ್ತೀಚೆಗೆ ಬಂದ ಕಾಂತಾರ ಬಗ್ಗೆ ಕೂಡ ಕೇಳಿದೆ, ಸಖತ್ ಆಗಿದ್ದೆಯಂತೆ. ಎಲ್ಲಿ ಹೋದರೂ ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡುತ್ತಿದ್ದಾರೆ. ತುಂಬ ಹೆಮ್ಮೆಯಾಗುತ್ತಿದೆ" ಎಂದು ನಾನಿ ಹೇಳಿದ್ದಾರೆ.
ಷಬ್ ಶೆಟ್ಟಿ ನಿರ್ದೇಶನದ, ನಟನೆಯ 'ಕಾಂತಾರ' ಸಿನಿಮಾ ರಿಲೀಸ್ ಆಗಿ ವಾರಗಳೇ ಉರುಳಿದರೂ ಕೂಡ ವೀಕೆಂಡ್ನಲ್ಲಿ ಕೂಡ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ಸಿಕ್ಕ ಅಮೋಘವಾದ ಪ್ರತಿಕ್ರಿಯೆ ಕಂಡು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಪರಭಾಷೆಯಲ್ಲಿ ಕೂಡ ಈ ಸಿನಿಮಾ ರಿಲೀಸ್ ಮಾಡಲು ತಯಾರಿ ಮಾಡಿಕೊಂಡಿದೆ.
'ಕೆಜಿಎಫ್ 2', '777 ಚಾರ್ಲಿ', 'ಕಾಂತಾರ', 'ಗರುಡ ಗಮನ ವೃಷಭ ವಾಹನ' ಸಿನಿಮಾಗಳು ದೊಡ್ಡ ಮಟ್ಟದ ಮೆಚ್ಚುಗೆ ಪಡೆದಿವೆ. ಕನ್ನಡದ ನಟರಿಗೆ ಪರಭಾಷೆಯಲ್ಲಿಯೂ ಕೂಡ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿಯಾಗಿದೆ. ಕೆಜಿಎಫ್ ಸಿನಿಮಾ ಮೂಲಕ ನಟ ರಾಕಿಂಗ್ ಸ್ಟಾರ್ ಯಶ್ ಅವರು ನ್ಯಾಶನಲ್ ಸ್ಟಾರ್ ಆಗಿ ಹೊರಹೊಮ್ಮಿದರು, ಪ್ರಶಾಂತ್ ನೀಲ್ ಅವರು ದಕ್ಷಿಣ ಭಾರತದ ಮೇರು ನಟರ ಜೊತೆ ಕೆಲಸ ಮಾಡುವ ಅವಕಾಶ ಪಡೆದರು. ಇನ್ನು ಹೊಂಬಾಳೆ ಫಿಲ್ಮ್ಸ್ ಭಾರತ ಚಿತ್ರರಂಗದ ದಿಗ್ಗಜ ನಟರ ಜೊತೆ ಸಿನಿಮಾ ಮಾಡಲು ತಯಾರಾಗಿದೆ.
ಕಳೆದ ಏಪ್ರಿಲ್ ತಿಂಗಳಲ್ಲಿ ಕೆಜಿಎಫ್ ಸಿನಿಮಾ ಸುದ್ದಿಗೋಷ್ಠಿಯಲ್ಲಿ ನಟ ಯಶ್ ಅವರ ಮುಂದೆ ತೆಲುಗು ನಿರ್ಮಾಪಕ ದಿಲ್ರಾಜು ಮಾತನಾಡಿ, "ಕನ್ನಡ ಚಿತ್ರರಂಗ ಚಿಕ್ಕದು, ಅಲ್ಲಿ ಕಡಿಮೆ ಬಜೆಟ್ನಲ್ಲಿ ತಯಾರಾಗುವ ಸಿನಿಮಾಗಳು ಹಣ ಕೂಡ ಮಾಡೋದಿಲ್ಲ ಎಂದು ನಾವು ತಿಳಿದಿದ್ದೆವು. ಆದರೆ ಯಶ್, ಪ್ರಶಾಂತ್ ನೀಲ್ ಅವರ ಕೆಜಿಎಫ್ ತಂಡ ಮಾತ್ರ ಎಲ್ಲ ಚಿತ್ರರಂಗಗಳು ಕೂಡ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿತು" ಎಂದು ಹೇಳಿದ್ದರು. ಅದಕ್ಕೆ ಉತ್ತರ ನೀಡಿದ್ದ ಯಶ್ ಅವರು, "ದಿಲ್ರಾಜು ಅವರು ನಮ್ಮ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ನಮ್ಮ ಚಿತ್ರರಂಗದವರು ತುಂಬ ಕಷ್ಟಪಡುತ್ತಿದ್ದಾರೆ, ಅದ್ಭುತ ಸಿನಿಮಾ ಕೂಡ ಮಾಡುತ್ತಿದ್ದಾರೆ. ಸಿನಿಮಾ ಮಾಡಿದ್ದಾರೆ ಕೂಡ. ನಮ್ಮ ಸಿನಿಮಾಗಳು 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುತ್ತಿದೆ. ಇದು ಯಾಕೆ ಎಂದು ನನಗೆ ಅರ್ಥವಾಗುತ್ತಿಲ್ಲ" ಎಂದು ಉತ್ತರ ನೀಡಿದ್ದರು.
ಕೆಜಿಎಫ್ ನಂತರ ಕನ್ನಡ ಚಿತ್ರರಂಗದತ್ತ ಎಲ್ಲರೂ ತಿರುಗಿ ನೋಡುತ್ತಿದ್ದಾರೆ ಎಂಬ ಮಾತು ಬಂದಾಗ ಉತ್ತರ ನೀಡಿದ್ದ ಕಿಚ್ಚ ಸುದೀಪ್, "ದೇವಸ್ಥಾನದ ಬಗ್ಗೆ ನಿಮಗೆ ತಡವಾಗಿ ಗೊತ್ತಾಗಿದೆ" ಎಂದು ಕನ್ನಡ ಚಿತ್ರರಂಗವನ್ನು ದೇವಸ್ಥಾನಕ್ಕೆ ಹೋಲಿಸಿ ಉತ್ತರ ನೀಡಿದ್ದರು.
67th Parle Filmfare Awards South 2022 Nani Appreciate Kannada Movies.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm