ಬ್ರೇಕಿಂಗ್ ನ್ಯೂಸ್
24-10-22 01:38 pm Source: Vijayakarnataka ಸಿನಿಮಾ
‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ( Ajay Rao ) ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ ಹೊಸ ಪ್ರತಿಭೆಗೆ ಅವಕಾಶ ನೀಡಿರುವ ನಿರ್ಮಾಪಕರು ಇಂಟ್ರಸ್ಟಿಂಗ್ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ. ಅದುವೇ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ( Bank Of Bhagyalakshmi ). ಇದು ಎಚ್. ಕೆ ಪ್ರಕಾಶ್ ಅವರ ಶ್ರೀದೇವಿ ಎಂಟರ್ಟೈನರ್ಸ್ ಬ್ಯಾನರ್ನಡಿ ನಿರ್ಮಾಣವಾಗುತ್ತಿರುವ ಐದನೇ ಸಿನಿಮಾವಾಗಿದೆ.
'ಬ್ಯಾಂಕ್ ಆಫ್ ಭಾಗ್ಯಲಕ್ಷಿ' ಕಥೆ ಕೇಳಿ ಥ್ರಿಲ್ ಆಗಿರೋ ನಟ ಅಜಯ್ ರಾವ್ ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಪ್ರತಿ ಬಾರಿ ನವ ನಿರ್ದೇಶಕರಿಗೆ ಮೊದಲ ಆದ್ಯತೆ ನೀಡುವ ನಿರ್ಮಾಪಕರಾದ ಎಚ್ ಕೆ ಪ್ರಕಾಶ್ ಈ ಬಾರಿಯೂ ನವ ಹಾಗೂ ಪ್ರತಿಭಾವಂತ ನಿರ್ದೇಶಕನೊಂದಿಗೆ ಕೈ ಜೋಡಿಸಿದ್ದಾರೆ. ಅಭಿಷೇಕ್ ಎಂ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ವುಡ್ ಅಂಗಳಕ್ಕೆ ಪರಿಚಿತರಾಗುತ್ತಿದ್ದಾರೆ.
ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ', ‘ಬಹುಪರಾಕ್' ಮತ್ತು ‘ಆಪರೇಷನ್ ಅಲಮೇಲಮ್ಮ' ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. 'ಪಿನಾಕ' ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಡಲು ಸಜ್ಜಾಗಿದ್ದಾರೆ.
ಬ್ಯಾಂಕ್ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಇಂಟ್ರಸ್ಟಿಂಗ್ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಇದಿಷ್ಟನ್ನೇ ರಿವೀಲ್ ಮಾಡಿರುವ ಸಿನಿಮಾ ತಂಡ ಮುಂಬರುವ ದಿನಗಳಲ್ಲಿ ಚಿತ್ರದ ಬಗ್ಗೆ, ನಾಯಕಿ ಮತ್ತು ಕಲಾವಿದರ ಬಳಗ ಇದೆಲ್ಲದರ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.
ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ತೇಜಸ್ ಆರ್ ಸಂಕಲನ, ರಾಘು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
Actor Ajay Rao Starrer Bank Of Bhagyalakshmi Movie.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm