ಬ್ರೇಕಿಂಗ್ ನ್ಯೂಸ್
26-10-22 01:43 pm Source: Vijayakarnataka ಸಿನಿಮಾ
ಡಾಲಿ ಧನಂಜಯ ( Dhananjaya ), ಲೂಸ್ ಮಾದ ಯೋಗಿ ನಟನೆಯ 'ಹೆಡ್ ಬುಷ್' ಸಿನಿಮಾ ( Head Bush Movie ) ರಿಲೀಸ್ ಆಗಿ, ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರದಲ್ಲಿ ಡಾನ್ ಎಂ ಪಿ ಜಯರಾಜ್ ಪಾತ್ರದಲ್ಲಿ ಧನಂಜಯ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಆರಂಭದಿಂದಲೂ ಒಂದಲ್ಲ ಒಂದು ವಿವಾದಕ್ಕೆ ಗುರಿಯಾಗುತ್ತಿದೆ. ಈ ಚಿತ್ರ ತೆರೆಕಂಡ ನಂತರದಲ್ಲಿ ವೀರಗಾಸೆಗೆ ಅವಮಾನ ಆಗಿದೆ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಧನಂಜಯ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ವೀರಗಾಸೆ ಹಾಕಿಕೊಂಡವರ ಮೇಲೆ ಡಾನ್ ಜಯರಾಜ್ ಹಲ್ಲೆ ಮಾಡಿದಂತೆ ಚಿತ್ರದಲ್ಲಿ ತೋರಿಸಲಾಗಿತ್ತು. ಇದರಿಂದ ವೀರಗಾಸೆಗೆ ಅವಮಾನ ಆಗಿತ್ತು ಎಂದು ಕೆಲವರು ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಧನಂಜಯ ಅವರು, "ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದು, ವೀರಗಾಸಗೆ ಅವಮಾನಿಸುವ ಯಾವ ಅಂಶವು ಇಲ್ಲದಂತೆ ನೋಡಿಕೆೊಂಡಿದ್ದೇನೆ. ದೂಷಿಸುವವರು ದಯವಿಟ್ಟು ಸಿನಿಮಾ ನೋಡಿ ಕೂಲಂಕುಷವಾಗಿ ವಿಮರ್ಶಿಸಬೇಕಾಗಿ ಕೇಳಿಕೊಳ್ಳುತ್ತೇನೆ. ನಾನು ಚಿಕ್ಕ ವಯಸ್ಸಿನಿಂದ ವೀರಗಾಸೆಯನ್ನು ನೋಡುತ್ತ ಬಂದಿದ್ದೇನೆ. ನನ್ನ ಸಿನಿಮಾ ರಿಲೀಸ್ ಸಂದರ್ಭದಲ್ಲಿ ವೀರಗಾಸೆಯನ್ನು ಕರೆಸಿದ್ದೆ. ನಮ್ಮೂರಿನ ಜಾತ್ರೆ, ದೇವಸ್ಥಾನದ ಕಾರ್ಯಕ್ರಮದಲ್ಲಿ ವೀರಗಾಸೆ ಇದ್ದೇ ಇರುತ್ತದೆ. ನನ್ನಿಂದ ಅದಕ್ಕೆ ಅವಮಾನ ಆಗುತ್ತದೆ ಎಂದಿದ್ದರೆ ನಾನು ಅಲ್ಲಿ ಅದನ್ನು ತರುತ್ತಿರಲಿಲ್ಲ" ಎಂದಿದ್ದಾರೆ.
"ಫೈಟ್ ನಡೆಯುವಾಗ ವೀರಗಾಸೆ ಹಾಕಿಕೊಂಡವರು ಹಿಂದೆ ಸರಿಯುತ್ತಾರೆ. ವೀರಗಾಸೆ ರೀತಿಯ ವೇಷ ಹಾಕಿದವರು ಮುಂದೆ ಬರುತ್ತಾರೆ. ವೀರಗಾಸೆ ವೇಳೆ ಚಪ್ಪಲಿ ಹಾಕುವಂತಿಲ್ಲ. ಆದರೆ ಜಯರಾಜ್ ಮೇಲೆ ಹಲ್ಲೆ ಮಾಡಿದವರು ಶೂ ಧರಿಸುತ್ತಾರೆ. ಆಗ ಅವನಿಗೆ ಇವರು ವೀರಗಾಸೆಯವರು ಅಲ್ಲ ಎಂದು ಗೊತ್ತಾಗುತ್ತದೆ. ಆಗ ಅವರ ಮೇಲೆ ಜಯರಾಜ್ ಹಲ್ಲೆ ಮಾಡುತ್ತಾನೆ. ವೀರಗಾಸೆಗೆ ಅವಮಾನ ಮಾಡುತ್ತಿರುವವರ ಮೇಲೆ ಜಯರಾಜ್ ಹೊಡೆಯುತ್ತಾನೆಯೇ ಹೊರತು, ಜಯರಾಜ್ ವೀರಗಾಸೆಗೆ ಅವಮಾನ ಮಾಡಿಲ್ಲ" ಎಂದು ಧನಂಜಯ ಹೇಳಿದ್ದಾರೆ.
'ಬಡವ ರಾಸ್ಕಲ್' ಸಿನಿಮಾಕ್ಕೆ ಧನಂಜಯ ಹಣ ಹೂಡಿದ್ದರು. ಅದಾದ ನಂತರದಲ್ಲಿ 'ಹೆಡ್ ಬುಷ್' ಚಿತ್ರಕ್ಕೆ ಹಣ ಹೂಡಿದ್ದಾರೆ. 70-80ರ ದಶಕದಲ್ಲಿ ನಡೆದ ನೈಜ ಘಟನೆ ಆಧರಿಸಿ ಅಗ್ನಿ ಶ್ರೀಧರ್ ಅವರ ‘ಮೈ ಡೇಸ್ ಇನ್ ದ ಅಂಡರ್ವರ್ಲ್ಡ್’ ಪುಸ್ತಕವನ್ನು ಬರೆದಿದ್ದರು. ಈ ಪುಸ್ತಕವೇ ಈಗ ‘ಹೆಡ್ ಬುಷ್’ ಸಿನಿಮಾ ಆಗಿದೆ. ಕೊತ್ವಾಲ್ ಪಾತ್ರದಲ್ಲಿ ವಸಿಷ್ಠ ಸಿಂಹ, ಗಂಗ ಅನ್ನೋ ಪಾತ್ರದಲ್ಲಿ ನಟ ಲೂಸ್ ಮಾದ ಯೋಗಿ, ರತ್ನಪ್ರಭಾ ಎಂಬ ರಾಜಕಾರಣಿಯೊಬ್ಬರ ಪಾತ್ರದಲ್ಲಿ ಶ್ರುತಿ ಹರಿಹರನ್ ನಟಿಸಿದ್ದಾರೆ. ಇದರ ಜೊತೆಗೆ ದೇವರಾಜ್, ರವಿಚಂದ್ರನ್, ಬಾಲು ನಾಗೇಂದ್ರ, ರಘು ಮುಖರ್ಜಿ, ಪೂರ್ಣಚಂದ್ರ, ರೋಷನ್ ಮುಂತಾದವರು ಬಣ್ಣ ಹಚ್ಚಿದ್ದಾರೆ. ಧನಂಜಯಗೆ ನಾಯಕಿಯಾಗಿ ಬಹುಭಾಷಾ ನಟಿ ಪಾಯಲ್ ರಜಪೂತ್ ನಟಿಸಿದ್ದಾರೆ.
Actor Dolly Dhananjaya Reaction On Head Bush Movie Veeragase Controversy.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm