ಬ್ರೇಕಿಂಗ್ ನ್ಯೂಸ್
            
                        16-11-22 12:38 pm Source: Vijayakarnataka ಸಿನಿಮಾ
            60ರ ದಶಕದಲ್ಲಿ ತೆರೆಕಂಡ ಡಾ. ರಾಜ್ಕುಮಾರ್ ಹಾಗೂ ಲೀಲಾವತಿ ಅಭಿನಯಿಸಿದ್ದ 'ವೀರ ಕೇಸರಿ' ಚಿತ್ರದ 'ಮೆಲ್ಲುಸಿರೆ ಸವಿಗಾನ..' ಹಾಡು ದೊಡ್ಡ ಹಿಟ್ ಆಗಿತ್ತು. ಈಗಲೂ ಕೂಡ ಈ ಹಾಡನ್ನು ಸಿನಿಪ್ರಿಯರು ಗುನುಗುತ್ತಾರೆ. ಇದೀಗ ಅದೇ ಹಾಡನ್ನು ಮತ್ತೊಮ್ಮೆ ಬಳಕೆ ಮಾಡಿಕೊಳ್ಳಲಾಗಿದೆ. 'ಸ್ಪೂಕಿ ಕಾಲೇಜ್' ಚಿತ್ರದಲ್ಲಿ ಈ ಹಾಡನ್ನು ಮರುಬಳಕೆ ಮಾಡಿಕೊಳ್ಳಲಾಗಿದೆ. ವಿಶೇಷವೆಂದರೆ, ಈ ಹಾಡಿನಲ್ಲಿ 'ಏಕ್ ಲವ್ ಯಾ' ಚಿತ್ರದ ಖ್ಯಾತಿಯ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಿರಿಯ ನಿರ್ದೇಶಕ ಭಗವಾನ್, ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ ಮುಂತಾದವರು ಕಾರ್ಯಕ್ರಮದಲ್ಲಿದ್ದರು.
ಹಳೇ ಹಾಡಿಗೆ ಎಲ್ಲಿಯೂ ಲೋಪವಾಗಿಲ್ಲ ಎಂದ ಭಗವಾನ್
ಈ ವೇಳೆ ಮಾತನಾಡಿದ ನಿರ್ದೇಶಕ ಭಗವಾನ್, 'ಆ ಕಾಲದಲ್ಲಿ ಸಿನಿಮಾ ಮಾಡುವುದು ಅಷ್ಟು ಸುಲಭ ಇರಲಿಲ್ಲ. ಈಗ ತಂತ್ರಜ್ಞಾನ ಮುಂದುವರೆದಿದೆ. 'ಮೆಲ್ಲುಸಿರೆ ಸವಿಗಾನ..' ಹಾಡಿಗೆ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಈ ಚಿತ್ರದಲ್ಲಿ ಬಳಸಿಕೊಂಡಿದ್ದಾರೆ. ರೀಷ್ಮಾ ನಾಣಯ್ಯ ಅಭಿನಯ, ಭೂಷಣ್ ನೃತ್ಯ ನಿರ್ದೇಶನ ಎಲ್ಲವೂ ಚೆನ್ನಾಗಿದೆ. ನಿರ್ದೇಶಕ ಭರತ್ ನನ್ನ ಶಿಷ್ಯ. ಚಿತ್ರಕ್ಕೆ ಒಳ್ಳೆಯ ನಾಯಕಿ..' ಎಂದು ಹಾರೈಸಿದರು. ಸಾಹಿತಿ ದೊಡ್ಡರಂಗೇಗೌಡ ಮಾತನಾಡಿ, 'ಅರವತ್ತರ ದಶಕದ ಈ ಹಾಡನ್ನು ಈಗಿನ ರೀತಿಗೆ ಚಿತ್ರೀಕರಿಸುವುದು ಕಷ್ಟಸಾಧ್ಯ. ಅದರೆ ಅದನ್ನು ನಿರ್ದೇಶಕ ಭರತ್ ಸಾಧ್ಯವಾಗಿಸಿದ್ದಾರೆ' ಎಂದರು.
ಈ ಹಾಡಿಗೆ ದಾಂಡೇಲಿಯಲ್ಲಿ ಚಿತ್ರೀಕರಣ
ಹಾಡನ್ನು ಚಿತ್ರೀಕರಿಸಿದ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಭರತ್, 'ಈ ಹಾಡನ್ನು ದಾಂಡೇಲಿಯಲ್ಲಿ ಚಿತ್ರಿಸಿಕೊಳ್ಳಲಾಯಿತು. ಸುಮಾರು 250 ಮಂದಿ ಇದಕ್ಕಾಗಿ ಕೆಲಸ ಮಾಡಿದ್ದಾರೆ. ಭೂಷಣ್ ನೃತ್ಯ ನಿರ್ದೇಶನದಲ್ಲಿ ರೀಷ್ಮಾ ನಾಣಯ್ಯ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೆ ಅಜನೀಶ್ ಲೋಕನಾಥ್ ಹೊಸ ಸ್ಪರ್ಶ ನೀಡಿದ್ದಾರೆ. ಐಶ್ವರ್ಯಾ ರಂಗರಾಜನ್ ಗಾಯನ ಹಾಗೂ ಮನೋಹರ್ ಜೋಷಿ ಅವರ ಛಾಯಾಗ್ರಹಣ ಈ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ವಿಶ್ವಾಸ್ ಕಲಾ ನಿರ್ದೇಶನ ಕೂಡ ಕಣ್ಮನ ಸೆಳೆಯುತ್ತದೆ. ಹಾಡು ಹಾಗೂ ಚಿತ್ರ ಅದ್ದೂರಿಯಾಗಿ ಮೂಡಿಬರಲು ನಿರ್ಮಾಪಕ ಎಚ್ ಕೆ ಪ್ರಕಾಶ್ ಅವರ ಸಹಕಾರ ಹಾಗೂ ನನ್ನ ಚಿತ್ರತಂಡದ ಶ್ರಮ ಕಾರಣ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿದೆ' ಎಂದರು.
![]()
'ಏಕ್ ಲವ್ ಯಾ' ಸಿನಿಮಾದಿಂದ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡಿರುವ ನಟಿ ರೀಷ್ಮಾ ನಾಣಯ್ಯ, ಈಚೆಗಷ್ಟೇ 'ರಾಣ' ಚಿತ್ರದಲ್ಲೂ ನಟಿಸಿದ್ದಾರೆ. ಈಗ 'ಮೆಲ್ಲುಸಿರೆ ಸವಿಗಾನ..' ಚಿತ್ರಕ್ಕಾಗಿ ಹೆಜ್ಜೆ ಹಾಕಿದ್ದಾರೆ. ಅಂದಹಾಗೆ, ಈ ಸಿನಿಮಾದಲ್ಲಿ ಪ್ರೀಮಿಯರ್ ಪದ್ಮಿನಿ ಖ್ಯಾತಿಯ ವಿವೇಕ್ ಸಿಂಹ ಹೀರೋ ಆಗಿದ್ದರೆ, ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ ನಾಯಕಿ. ಛಾಯಾಗ್ರಹಣವನ್ನು ಮನೋಹರ್ ಜೋಷಿ ಮಾಡಿದ್ದಾರೆ. 'ರಂಗಿತರಂಗ', 'ಅವನೇ ಶ್ರೀಮನ್ನಾರಾಯಣ' ಖ್ಯಾತಿಯ ಎಚ್ ಕೆ ಪ್ರಕಾಶ್ ಈ ಸಿನಿಮಾಕ್ಕೆ ಹಣ ಹಾಕಿದ್ದಾರೆ.
            
            
            Reeshma Nanaiah Kushee Ravi Vivek Simha Starrer Spooky College Movie Mellusire Song Released.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm