ಬ್ರೇಕಿಂಗ್ ನ್ಯೂಸ್
17-11-22 02:19 pm Source: Vijayakarnataka ಸಿನಿಮಾ
ಸ್ಯಾಂಡಲ್ವುಡ್ನಲ್ಲಿ ಜನಪ್ರಿಯ ನಿರ್ದೇಶಕ ಮತ್ತು ನಟರ ಕಾಂಬಿನೇಶನ್ ಚಿತ್ರಗಳು ಹೆಚ್ಚುತ್ತಿವೆ. ಈ ಸಾಲಿಗೆ ಮತ್ತೊಂದು ಹೊಸ ಸಿನಿಮಾ ಸೇರ್ಪಡೆಯಾಗಿದೆ.ಒಬ್ಬ ನಿರ್ದೇಶಕ ಒಬ್ಬ ನಟನೊಂದಿಗೆ ಎರಡನೇ ಬಾರಿ ಕೆಲಸ ಮಾಡುತ್ತಿದ್ದಾರೆ ಎಂದರೆ, ಆ ನಿರ್ದೇಶಕನ ಮೇಲೆ ನಟನಿಗೆ ಹೆಚ್ಚಿನ ನಂಬಿಕೆ ಇದೆ ಎಂದರ್ಥ. ಇದು ಸೂಪರ್ ಹಿಟ್ ಸಿನಿಮಾಗಳಿಗೂ ನಾಂದಿಯಾಗುತ್ತದೆ. ಕನ್ನಡದಲ್ಲಿ ಈಗಾಗಲೇ ನಿರ್ದೇಶಕ ಮತ್ತು ನಟನ ಹಲವು ಸೂಪರ್ ಹಿಟ್ ಕಾಂಬಿನೇಶನ್ಗಳಿವೆ. ಈಗ ನಿರ್ದೇಶಕ ಲೋಹಿತ್ ಮತ್ತು ನಟ ಪ್ರಜ್ವಲ್ ದೇವರಾಜ್ ಈ ಸೂಪರ್ ಹಿಟ್ ಕಾಂಬಿನೇಶನ್ ಸಾಲಿಗೆ ಸೇರುವ ಸಾಧ್ಯತೆ ಇದೆ.
ಈ ಹಿಂದೆ ಇವರಿಬ್ಬರು ಜತೆಯಾಗಿ 'ಮಾಫಿಯಾ' ಸಿನಿಮಾ ಮಾಡಿದ್ದು, ಅವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವಾಗಲೇ ಕನ್ನಡದ ಮೊದಲ ಹಾರರ್ ಟೈಮ್ ಲೂಪ್ ಸಿನಿಮಾಗಾಗಿ ಇವರು ಒಂದಾಗಿದ್ದಾರೆ. ಮಮ್ಮಿ ಸಿನಿಮಾ ಮೂಲಕ ಹೆಸರು ಮಾಡಿರುವ ಲೋಹಿತ್ ಅತಿ ಚಿಕ್ಕ ವಯಸ್ಸಿಗೆ ಯಶಸ್ವಿ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಅವರೀಗ 'ಮಾಫಿಯಾ' ಸಿನಿಮಾದಲ್ಲಿ ಬಿಝಿಯಾಗಿದ್ದು, ಇದರ ನಡುವೆ ನಟ ಪ್ರಜ್ವಲ್ ದೇವರಾಜ್ರಿಗೆ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ.
'ಮಾಫಿಯಾ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಚರ್ಚೆಯಲ್ಲಿದ್ದಾಗ ಈ ಸಿನಿಮಾ ಸಬ್ಜೆಕ್ಟ್ ಬಗ್ಗೆ ಹೇಳಿದೆ. ಪ್ರಜ್ವಲ್ ಬಹಳ ಇಷ್ಟಪಟ್ಟು ನಟಿಸುತ್ತೇನೆ ಎಂದರು. ಜತೆಗೆ ನನ್ನ ವರ್ಕಿಂಗ್ ಸ್ಟೈಲ್ ಅವರಿಗೆ ಇಷ್ಟವಾಗಿದೆ. ಇದು ಪಕ್ಕಾ ಕಮರ್ಷಿಯಲ್ ಸಿನಿಮಾ ಮತ್ತು ಹಾರರ್ ಟೈಮ್ ಲೂಪ್. ಇದರಲ್ಲಿ ಪ್ರಜ್ವಲ್ ಲುಕ್ಸ್ ಸೇರಿದಂತೆ ಹಲವು ವಿಶೇಷತೆಗಳಿವೆ. ಅಚಿಂತ್ಯ ಮತ್ತು ಶಾನ್ವಿ ಎಂಬವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ' ಎಂದು ಹೇಳಿದ್ದಾರೆ ನಿರ್ದೇಶಕ ಲೋಹಿತ್.
'ಮಾಫಿಯಾ ಸಿನಿಮಾದ ಸಮಯದಲ್ಲಿಯೇ ನಿರ್ದೇಶಕ ಲೋಹಿತ್ ಸಾಮರ್ಥ್ಯದ ಬಗ್ಗೆ ನನಗೆ ಗೊತ್ತಾಯಿತು. ಹೊಸ ಸಿನಿಮಾದ ಕಥೆ ನನಗೆ ಬಹಳ ಥ್ರಿಲ್ಲಿಂಗ್ ಎನಿಸಿತು. ಲೋಹಿತ್ ಒಳ್ಳೆಯ ತಂತ್ರಜ್ಞ. ಈ ಸಿನಿಮಾದಲ್ಲಿ ಟೈಮ್ ಲೂಪ್ ಜತೆಗೆ ಹಾರರ್ ಕಂಟೆಂಟ್ ಇರುವ ಕಾರಣ ಪ್ರೇಕ್ಷಕರಿಗೂ ಇದು ಥ್ರಿಲ್ಲಿಂಗ್ ಎನಿಸುತ್ತದೆ. ಸದ್ಯಕ್ಕೆ ಈ ಸಿನಿಮಾದ ಒನ್ಲೈನ್ ಮಾತ್ರ ಹೇಳಿದ್ದಾರೆ' ಎಂದಿದ್ದಾರೆ ನಟ ಪ್ರಜ್ವಲ್ ದೇವರಾಜ್. 'ಮಾಫಿಯಾ' ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದ ಮೇಲೆ ಡಿಸೆಂಬರ್ನಲ್ಲಿ ಈ ಸಿನಿಮಾ ಆರಂಭವಾಗಲಿದೆ. ಹೊಸ ಸಿನಿಮಾಗೆ ನಾಬಿನ್ ಪೌಲ್ ಸಂಗೀತ ನೀಡಲಿದ್ದು, ರವಿಚಂದ್ರನ್ ಸಂಕಲನ ಮಾಡಲಿದ್ದಾರೆ. ಜಬೀನ್ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಲಿದ್ದಾರೆ.
Lohith And Prajwal Devaraj Join Hands For Another Movie.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm