ಬ್ರೇಕಿಂಗ್ ನ್ಯೂಸ್
18-11-22 01:38 pm Source: Vijayakarnataka ಸಿನಿಮಾ
ಹೊಂಬಾಳೆ ಫಿಲಂಸ್ ಬ್ಯಾನರ್ನಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿ, ರಿಷಭ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರವು ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಸೆ. 30ರಂದು ಬಿಡುಗಡೆಯಾದ ಚಿತ್ರವು ರಾಜ್ಯದ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲದೆ, ವಿದೇಶಗಳಲ್ಲೂ ಹಲವು ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಮುಗಿಸಿ, 100ನೇ ದಿನದತ್ತ ದಾಪುಗಾಲಿಟ್ಟಿದೆ.
ಬರೀ ಕನ್ನಡವಷ್ಟೇ ಅಲ್ಲ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂಗೆ ಡಬ್ ಆಗಿರುವ ‘ಕಾಂತರ’, ಅಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಸದ್ಯದಲ್ಲೇ ಅಲ್ಲೂ 50 ದಿನಗಳನ್ನು ಪೂರೈಸಲಿದೆ. ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲಂಸ್. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲಾ ನೋಡಿ ಇಷ್ಟಪಟ್ಟಿದ್ದಾರೆ. ಹಿರಿಯರಿಂದ ಕಿರಿಯರವರೆಗೂ ಎಲ್ಲರೂ ಮೆಚ್ಚಿಕೊಂಡಿರುವ ಈ ಚಿತ್ರ ಎಲ್ಲರಿಗೂ ಇಷ್ಟವಾಗುವುದಕ್ಕೆ ಕಾರಣ ಚಿತ್ರದ ಕಥೆ ಮತ್ತು ಮೇಕಿಂಗ್.

ಹೊಂಬಾಳೆ ಫಿಲಂಸ್ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ರಾಜ್ಕುಮಾರ’, ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳು ಈ ವಿಷಯವನ್ನು ನಿರೂಪಿಸಿದೆ. ಈಗ ‘ಕಾಂತಾರ’ ಸಹ ಇದೇ ನಿಟ್ಟಿನಲ್ಲಿ ಸಾಗಿರುವುದಷ್ಟೇ ಅಲ್ಲ, ‘ಕೆಜಿಎಫ್’ ಸರಣಿಯ ನಂತರ ಒಂದೇ ಸಂಸ್ಥೆಯ ಇನ್ನೊಂದು ಚಿತ್ರ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ವಿಶೇಷ.
ಬರೀ ಕನ್ನಡವಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ಹಲವು ಚಿತ್ರಗಳನ್ನು ನಿರ್ಮಿಸುತ್ತಿದೆ. ಒಂದೇ ಸಂಸ್ಥೆಯಿಂದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ.
ಈಗಾಗಲೇ ಕನ್ನಡದಲ್ಲಿ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಮತ್ತು ಯುವ ರಾಜ್ಕುಮಾರ್ಗಾಗಿ ಸಂತೋಷ್ ಆನಂದರಾಮ್ ನಿರ್ದೇಶಿಸಲಿರುವ ಹೊಸ ಚಿತ್ರಗಳು ಸದ್ಯದಲ್ಲೇ ಶುರುವಾಗಲಿವೆ.
ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದ್ದು, ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರ ನಿರ್ದೇಶನ ಮಾಡಿದರೆ, ಇನ್ನೊಂದರ ಘೋಷಣೆ ಶೀಘ್ರದಲ್ಲೇ ಆಗಲಿದೆ.
ಮಲಯಾಳಂನಲ್ಲೂ ಹೊಂಬಾಳೆ ಫಿಲಂಸ್ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ. ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.
Rishab Shetty Kantara Movie Completes 50 Days In 300 Theatres Worldwide.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm