ಬ್ರೇಕಿಂಗ್ ನ್ಯೂಸ್
30-11-22 12:37 pm Source: Vijayakarnataka ಸಿನಿಮಾ
"ವ್ಯಕ್ತಿಯೊಬ್ಬರು ಕೃತಿ ಸನೋನ್ ಅವರನ್ನು ( Kriti Sanon ) ಹೃದಯದಲ್ಲಿ ಇಟ್ಟುಕೊಂಡಿದ್ದಾರೆ. ಆ ವ್ಯಕ್ತಿ ಮುಂಬೈನಲ್ಲಿ ಇರೋದಿಲ್ಲ, ಈಗ ದೀಪಿಕಾ ಪಡುಕೋಣೆ ಜೊತೆ ಸಿನಿಮಾ ಶೂಟಿಂಗ್ ಮಾಡುತ್ತಿದ್ದಾರೆ" ಎಂದು ಇತ್ತೀಚೆಗೆ ರಿಯಾಲಿಟಿ ಶೋನಲ್ಲಿ ವರುಣ್ ಧವನ್ ಅವರು ಹೇಳಿದರು. ಹೀಗಂದಿದ್ದೇ ತಡ ಪ್ರಭಾಸ್ ಅವರು ( Prabhas ) ಕೃತಿಯನ್ನು ಪ್ರೀತಿ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಡಲು ಶುರುವಾಯ್ತು.
ಏನೇನು ಗಾಸಿಪ್ ಹರಡಿತು?
ಹೋದಲ್ಲಿ ಬಂದಲ್ಲೆಲ್ಲ ವರುಣ್ ಧವನ್ ಅವರು ಕೃತಿ ಸನೋನ್ ಪ್ರೀತಿ ಮಾಡುತ್ತಿದ್ದಾರೆ ಎಂದು ಹೇಳತೊಡಗಿದರು. 'ಆದಿಪುರುಷ್' ಸಿನಿಮಾದಲ್ಲಿ ಕೃತಿ ಹಾಗೂ ಪ್ರಭಾಸ್ ಒಟ್ಟಿಗೆ ನಟಿಸುತ್ತಿದ್ದಾರೆ. ಅಲ್ಲಿಂದಲೇ ಅವರ ಮಧ್ಯೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿದೆ ಎಂದು ಕೆಲವರು ಊಹಿಸಿಕೊಳ್ಳಲು ಶುರುಮಾಡಿದರು. ಇದಕ್ಕೆಲ್ಲ ಕೃತಿ ಸನೋನ್ ಅವರು ಉತ್ತರ ನೀಡಿದ್ದಾರೆ.

ಕೃತಿ ಸನೋನ್ ಸ್ಪಷ್ಟನೆ
"ಪ್ರೀತಿಯೂ ಇಲ್ಲ. ರಿಯಾಲಿಟಿ ಶೋನಲ್ಲಿ ನಮ್ಮ ಭೆಡಿಯಾ ( ತೋಳ ) ಸ್ವಲ್ಪ ಕ್ರೂರವಾಯ್ತು. ಅವ ಫನ್ ಸಾಕಷ್ಟು ಗಾಸಿಪ್ಗಳಿಗೆ ಕಾರಣವಾಯ್ತು. ಕೆಲವೊಬ್ಬರು ನನ್ನ ಮದುವೆಯ ಡೇಟ್ ಕೂಡ ಘೋಷಣೆ ಮಾಡಿದರು. ಅದು ಬೇಸ್ಲೆಸ್" ಎಂದು ಕೃತಿ ಸನೋನ್ ಅವರು ಸೋಶಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ.
ಕಲೆಕ್ಷನ್ ಮಾಡುತ್ತಿರುವ 'ಭೆಡಿಯಾ'
ಕೃತಿ ಸನೋನ್, ವರುಣ್ ಧವನ್ ನಟನೆಯ 'ಭೆಡಿಯಾ' ಸಿನಿಮಾವನ್ನು ಅಮರ್ ಕೌಶಿಕ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ.

3D ರೂಪದಲ್ಲಿ ಚಿತ್ರೀಕರಣ ಮಾಡಲಾಗಿರುವ ಆದಿಪುರುಷ್
ನಟ ಪ್ರಭಾಸ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ಅವರ ಮುಂದಿನ ಸಿನಿಮಾ 'ಆದಿಪುರುಷ್' ಮೇಲೆ ದೊಡ್ಡ ನಿರೀಕ್ಷೆ ಇದೆ. ಜನವರಿ 12ರಂದು ಆ ಸಿನಿಮಾ ತೆರೆಗೆ ಬರಲಿದೆ. ನಿರ್ದೇಶಕ ಓಂ ರಾವುತ್ 'ಆದಿಪುರುಷ್' ಸಿನಿಮಾವನ್ನು ಸಂಪೂರ್ಣ 3D ರೂಪದಲ್ಲಿ ಚಿತ್ರೀಕರಣ ಮಾಡಲಾಗಿದೆ. ಬಹುತೇಕ ಗ್ರೀನ್ ಮ್ಯಾಟ್ (ಕ್ರೋಮಾ ಸ್ಕ್ರೀನ್) ಬಳಸಿ, ಸ್ಟುಡಿಯೋ ಒಳಗೆ ಚಿತ್ರೀಕರಣ ಮಾಡಲಾಗಿದೆ. ಹಾಗಾಗಿ, ವಿಎಫ್ಎಕ್ಸ್ ಕೆಲಸಗಳು ಜಾಸ್ತಿ ಇತ್ತು.
ದೊಡ್ಡ ತಾರಾಗಣವಿದೆ
'ಆದಿಪುರುಷ್' ಶ್ರೀರಾಮನ ಕುರಿತ ಸಿನಿಮಾ. ಶ್ರೀರಾಮನಾಗಿ ಪ್ರಭಾಸ್ ನಟಿಸಿದ್ದು, ರಾವಣನಾಗಿ ಸೈಫ್ ಅಲಿ ಖಾನ್ ನಟಿಸಿದ್ದು ಅವರ ಪಾತ್ರವನ್ನು ಲಂಕೇಶ ಎಂದು ಕರೆಯಲಾಗಿದೆ. ಕೃತಿ ಸನೋನ್ ಇಲ್ಲಿ ಸೀತೆಯಾಗಿ ನಟಿಸಿದ್ದಾರೆ. ಅವರನ್ನು ಸಿನಿಮಾದಲ್ಲಿ ಜಾನಕಿ ಎಂದು ಕರೆಯಲಾಗಿದೆ. ದೇವದತ್ತ ನಾಗೆ ಅವರು ಹನುಮಾನ್ ಆಗಿ ಬಣ್ಣ ಹಚ್ಚಿದ್ದು, ಲಕ್ಷ್ಮಣನಾಗಿ ಸನ್ನಿ ಸಿಂಗ್ ಇದ್ದಾರೆ. ಇಡೀ ಸಿನಿಮಾವನ್ನು ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದಲ್ಲಿ ಸೆರೆಹಿಡಿಯಲಾಗಿದೆ.
Actress Kriti Sanon Clarification On Love Marriage Gossip With Prabhas.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm