ಬ್ರೇಕಿಂಗ್ ನ್ಯೂಸ್
09-12-22 01:38 pm Source: Vijayakarnataka ಸಿನಿಮಾ
'ಗಾಡ್ ಆಫ್ ಮಾಸ್' ಎಂದೇ ಕರೆಸಿಕೊಳ್ಳುವ ತೆಲುಗು ನಟ ನಂದಮುರಿ ಬಾಲಕೃಷ್ಣ ( Nandamuri Balakrishna ) 108ನೇ ಸಿನಿಮಾ ಇಂದು ಅದ್ದೂರಿಯಾಗಿ ಸೆಟ್ಟೇರಿದೆ. ಬಾಲಕೃಷ್ಣ 108ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಇಬ್ಬರ ಕ್ರೇಜಿ ಕಾಂಬಿನೇಶನ್ನಲ್ಲಿ ಮೂಡಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರಕ್ಕೆ ಶೈನ್ ಸ್ಕ್ರೀನ್ಸ್ ಬ್ಯಾನರ್ ನಡಿ ಸಾಹು ಗರಪಟಿ ಮತ್ತು ಹರೀಶ್ ಪೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.
ಅದ್ದೂರಿಯಾಗಿ ನಡೆದ ಮುಹೂರ್ತ
NBK108ನೇ ಚಿತ್ರಕ್ಕೆ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದ್ದು, ನಿರ್ಮಾಪಕ ದಿಲ್ ರಾಜು ಕ್ಯಾಮೆರಾ ಚಾಲನೆ, ಲೆಜೆಂಡರಿ ನಿರ್ದೇಶಕ ಕೆ.ರಾಘವೇಂದ್ರ ರಾವ್ ಮುಹೂರ್ತ ಸೀನ್ಗೆ ಆಕ್ಷನ್ ಕಟ್ ಹೇಳುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಪ್ಯಾನ್ ಇಂಡಿಯಾ ಸಿನಿಮಾ
ಬಾಲಕೃಷ್ಣ ಅಭಿನಯದ 108ನೇ ಸಿನಿಮಾ ಇದಾಗಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿ ಈ ಚಿತ್ರ ಮೂಡಿ ಬರ್ತಿದೆ. ಸದ್ಯದಲ್ಲೇ ಟೈಟಲ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ. ಇಂದಿನಿಂದಲೇ ಚಿತ್ರೀಕರಣ ಆರಂಭವಾಗಲಿದ್ದು, ಆಕ್ಷನ್ ಸೀನ್ ನೊಂದಿಗೆ ಚಿತ್ರೀಕರಣ ಆರಂಭವಾಗಲಿದೆ. ಆಕ್ಷನ್ ಸೀನ್ ಸೆರೆ ಹಿಡಿಯಲೆಂದೇ ರಾಜೀವನ್ ಅವರ ನೇತೃತ್ವದಲ್ಲಿ ದೊಡ್ಡ ಸೆಟ್ಗಳನ್ನು ನಿರ್ಮಾಣ ಮಾಡಲಾಗಿದ್ದು, ಖ್ಯಾತ ಸಾಹಸ ನಿರ್ದೇಶಕ ವಿ. ವೆಂಕಟ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಕನ್ನಡ ನಟಿ ಶ್ರೀಲೀಲಾ ನಾಯಕಿ
ಆಕ್ಷನ್ ಹಾಗೂ ಮಾಸ್ ಎಲಿಮೆಂಟ್ ಒಳಗೊಂಡ ಈ ಚಿತ್ರಕ್ಕೆ ಬಾಲಕೃಷ್ಣ ಅವರ ಮಾಸ್ ಇಮೇಜ್, ಸ್ಟಾರ್ ಡಂ ಎಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅನಿಲ್ ರವಿಪುಡಿ ಪವರ್ ಫುಲ್ ಕಥೆ ಹೆಣೆದಿದ್ದಾರೆ. ಈ ಚಿತ್ರದಲ್ಲಿ ಕನ್ನಡದ ನಟಿ ಶ್ರೀಲೀಲಾ ( Sreeleela ) ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಎಸ್. ತಮನ್ ಸಂಗೀತ ನಿರ್ದೇಶನವಿದೆ.
ದೊಡ್ಡ ತಾರಾಗಣ
ಬಾಲಕೃಷ್ಣ, ಅನಿಲ್ ರವಿಪುಡಿ, ಎಸ್. ತಮನ್ ಈ ಮೂರು ಕಾಂಬಿನೇಶನ್ ಒಂದಾಗಿರೋ ಈ ಚಿತ್ರದ ಮೇಲೆ ಬಾಲಯ್ಯ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿ.ರಾಮ್ ಪ್ರಸಾದ್ ಕ್ಯಾಮೆರಾ ನಿರ್ದೇಶನ, ತಮ್ಮಿ ರಾಜು ಸಂಕಲನ ಚಿತ್ರಕ್ಕಿದೆ. ಸದ್ಯದಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.
Nandamuri Balakrishna Nbk 108 Movie Heroine Sreeleela.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm