ಬ್ರೇಕಿಂಗ್ ನ್ಯೂಸ್
26-12-22 12:03 pm Source: Vijayakarnataka ಸಿನಿಮಾ
ಧಾರಾವಾಹಿ ಶೂಟಿಂಗ್ ವೇಳೆ ಮೇಕಪ್ ವ್ಯಾನ್ನಲ್ಲಿ ಆತ್ಮಹತ್ಯೆಗೆ ಶರಣಾದ ಕಿರುತೆರೆಯ ಜನಪ್ರಿಯ ನಟಿ ತುನಿಶಾ ಶರ್ಮಾ (20) ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಸದ್ಯ ತುನಿಶಾ ಶರ್ಮಾ (Tunisha Sharma ) ಅವರ ಸಹ ನಟ ಹಾಗೂ ಮಾಜಿ ಪ್ರೇಮಿ ಎನ್ನಲಾಗಿರುವ ಶೀಜಾನ್ ಮೊಹಮ್ಮದ್ ಖಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ, ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ರಾಮ್ ಕದಮ್ (BJP MLA Ram Kadam), ‘ಲವ್ ಜಿಹಾದ್ (Love Jihad) ಸಂಚು ಕಾರಣ ಇರಬಹುದು..' ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ತುನಿಶಾ ಕುಟುಂಬಕ್ಕೆ ನ್ಯಾಯ ಸಿಗಬೇಕು
ಈ ಬಗ್ಗೆ ಭಾನುವಾರ (ಡಿ.25) ಪ್ರತಿಕ್ರಿಯೆ ನೀಡರುವ ಬಿಜೆಪಿ ಶಾಸಕ ರಾಮ್ ಕದಮ್, 'ಆತ್ಮಹತ್ಯೆ ನಡೆದಿದೆ ಸರಿ, ಆದರೆ ಕಾರಣ ಏನು? ಲವ್ ಜಿಹಾದ್ ಇರಬಹುದೇ? ಎಲ್ಲಆಯಾಮದಲ್ಲಿ ತನಿಖೆ ನಡೆದು ತುನಿಶಾ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸುವೆ. ಲವ್ ಜಿಹಾದ್ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕರೆ , ಸಂಚಿನ ಹಿಂದಿರುವ ಸಂಘಟನೆ ಬಗ್ಗೆಯೂ ಶೀಘ್ರವೇ ಮಾಹಿತಿ ಬಯಲಾಗಲಿದೆ..' ಎಂದಿದ್ದಾರೆ.

ತುನಿಶಾ ತೀವ್ರ ಮಾನಸಿಕ ಒತ್ತಡದಲ್ಲಿದ್ದರು
ತುನಿಶಾ ಅವರ ಸಹ ನಟ ಹಾಗೂ ಮಾಜಿ ಪ್ರೇಮಿ ಎನ್ನಲಾಗಿರುವ ಶೀಜಾನ್ ಮೊಹಮ್ಮದ್ ಖಾನ್ನನ್ನು ಕೇಸ್ ಸಂಬಂಧ ಬಂಧಿಸಿರುವ ಮುಂಬಯಿ ಪೊಲೀಸರು ವಸಾಯ್ ಕೋರ್ಟ್ಗೆ ಹಾಜರುಪಡಿಸಿ ನಾಲ್ಕು ದಿನಗಳವರೆಗೆ ವಶಕ್ಕೆ ಪಡೆದುಕೊಂಡಿದ್ದಾರೆ. ಸಾವಿಗೂ 15 ದಿನಗಳ ಮುನ್ನ ತುನಿಶಾ- ಶೀಜಾನ್ ನಡುವೆ ಜಗಳವಾಗಿತ್ತು. ಪ್ರೇಮ ಸಂಬಂಧವನ್ನು ಮುರಿದುಕೊಳ್ಳಲು ನಿರ್ಧರಿಸಲಾಗಿತ್ತು. ಇದರಿಂದ ತುನಿಶಾ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಪೊಲೀಸರು ಎಫ್ಐಆರ್ನಲ್ಲಿ ದಾಖಲಿಸಿದ್ದಾರೆ.

ತುನಿಶಾ ಶರ್ಮಾ ಗರ್ಭಿಣಿ ಆಗಿರಲಿಲ್ಲ
ಮುಂಬಯಿನ ಜೆಜೆ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ವೇಳೆಗೆ ತುನಿಶಾ ಶರ್ಮಾ ಅವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಪೊಲೀಸರಿಗೆ ನೀಡಲಾಗಿರುವ ವರದಿಯಲ್ಲಿ ಆಕೆಯು ಗರ್ಭಿಣಿ ಆಗಿರಲಿಲ್ಲ ಎಂದು ಉಲ್ಲೇಖಿಸಲಾಗಿದೆ. ಕತ್ತಿಗೆ ಬಿಗಿಯಾದ ದಾರ ಅಥವಾ ಬಟ್ಟೆಯ ಬಿಗಿತದಿಂದ ಉಸಿರುಗಟ್ಟಿ ಸತ್ತಿದ್ದಾರೆ ಎಂದು ವರದಿ ಹೇಳಿದೆ. ಡಿ.26ರ ಸಂಜೆ ತುನಿಶಾ ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಿದ್ದಾರೆ.
ಅಂದಹಾಗೆ, 20 ವರ್ಷದ ತುನಿಶಾ ಶರ್ಮಾ ಹಲವು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು. ಐತಿಹಾಸಿಕ ಧಾರಾವಾಹಿ 'ಭಾರತ್ ಕಾ ವೀರ್ ಪುತ್ರ-ಮಹಾರಾಣಾ ಪ್ರತಾಪ' ಮೂಲಕ ನಟನೆ ಆರಂಭಿಸಿದ್ದ ಅವರು, 'ಚಕ್ರವರ್ತಿ ಅಶೋಕ್ ಸಾಮ್ರಾಟ್', 'ಗಬ್ಬರ್ ಪೂಂಚವಾಲಾ', 'ಶೀರ್ ಇ ಪಂಜಾಬ್; ಮಹಾರಾಜ ರಂಜಿತ್ ಸಿಂಗ್', 'ಇಂಟರ್ನೆಟ್ ವಾಲಾ ಲವ್', 'ಇಶ್ಕ್ ಸುಬಾನ್ ಅಲ್ಲಾ' ಮುಂತಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ 'ಫಿತೂರ್', 'ಬಾರ್ ಬಾರ್ ದೆಖೋ', 'ಕಹಾನಿ 2; ದುರ್ಗ ರಾಣಿ ಸಿಂಗ್', 'ದಬಂಗ್ 3' ಸಿನಿಮಾಗಳಲ್ಲೂ ತುನಿಶಾ ಬಣ್ಣ ಹಚ್ಚಿದ್ದರು.
Tunisha Sharma Bjp Mla Ram Kadam Claims Love Jihad Angle In Actress Death.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm