ಬ್ರೇಕಿಂಗ್ ನ್ಯೂಸ್
26-12-22 12:03 pm Source: Vijayakarnataka ಸಿನಿಮಾ
ಧಾರಾವಾಹಿ ಶೂಟಿಂಗ್ ವೇಳೆ ಮೇಕಪ್ ವ್ಯಾನ್ನಲ್ಲಿ ಆತ್ಮಹತ್ಯೆಗೆ ಶರಣಾದ ಕಿರುತೆರೆಯ ಜನಪ್ರಿಯ ನಟಿ ತುನಿಶಾ ಶರ್ಮಾ (20) ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಸದ್ಯ ತುನಿಶಾ ಶರ್ಮಾ (Tunisha Sharma ) ಅವರ ಸಹ ನಟ ಹಾಗೂ ಮಾಜಿ ಪ್ರೇಮಿ ಎನ್ನಲಾಗಿರುವ ಶೀಜಾನ್ ಮೊಹಮ್ಮದ್ ಖಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ, ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ರಾಮ್ ಕದಮ್ (BJP MLA Ram Kadam), ‘ಲವ್ ಜಿಹಾದ್ (Love Jihad) ಸಂಚು ಕಾರಣ ಇರಬಹುದು..' ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ತುನಿಶಾ ಕುಟುಂಬಕ್ಕೆ ನ್ಯಾಯ ಸಿಗಬೇಕು
ಈ ಬಗ್ಗೆ ಭಾನುವಾರ (ಡಿ.25) ಪ್ರತಿಕ್ರಿಯೆ ನೀಡರುವ ಬಿಜೆಪಿ ಶಾಸಕ ರಾಮ್ ಕದಮ್, 'ಆತ್ಮಹತ್ಯೆ ನಡೆದಿದೆ ಸರಿ, ಆದರೆ ಕಾರಣ ಏನು? ಲವ್ ಜಿಹಾದ್ ಇರಬಹುದೇ? ಎಲ್ಲಆಯಾಮದಲ್ಲಿ ತನಿಖೆ ನಡೆದು ತುನಿಶಾ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸುವೆ. ಲವ್ ಜಿಹಾದ್ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕರೆ , ಸಂಚಿನ ಹಿಂದಿರುವ ಸಂಘಟನೆ ಬಗ್ಗೆಯೂ ಶೀಘ್ರವೇ ಮಾಹಿತಿ ಬಯಲಾಗಲಿದೆ..' ಎಂದಿದ್ದಾರೆ.

ತುನಿಶಾ ತೀವ್ರ ಮಾನಸಿಕ ಒತ್ತಡದಲ್ಲಿದ್ದರು
ತುನಿಶಾ ಅವರ ಸಹ ನಟ ಹಾಗೂ ಮಾಜಿ ಪ್ರೇಮಿ ಎನ್ನಲಾಗಿರುವ ಶೀಜಾನ್ ಮೊಹಮ್ಮದ್ ಖಾನ್ನನ್ನು ಕೇಸ್ ಸಂಬಂಧ ಬಂಧಿಸಿರುವ ಮುಂಬಯಿ ಪೊಲೀಸರು ವಸಾಯ್ ಕೋರ್ಟ್ಗೆ ಹಾಜರುಪಡಿಸಿ ನಾಲ್ಕು ದಿನಗಳವರೆಗೆ ವಶಕ್ಕೆ ಪಡೆದುಕೊಂಡಿದ್ದಾರೆ. ಸಾವಿಗೂ 15 ದಿನಗಳ ಮುನ್ನ ತುನಿಶಾ- ಶೀಜಾನ್ ನಡುವೆ ಜಗಳವಾಗಿತ್ತು. ಪ್ರೇಮ ಸಂಬಂಧವನ್ನು ಮುರಿದುಕೊಳ್ಳಲು ನಿರ್ಧರಿಸಲಾಗಿತ್ತು. ಇದರಿಂದ ತುನಿಶಾ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಪೊಲೀಸರು ಎಫ್ಐಆರ್ನಲ್ಲಿ ದಾಖಲಿಸಿದ್ದಾರೆ.

ತುನಿಶಾ ಶರ್ಮಾ ಗರ್ಭಿಣಿ ಆಗಿರಲಿಲ್ಲ
ಮುಂಬಯಿನ ಜೆಜೆ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ವೇಳೆಗೆ ತುನಿಶಾ ಶರ್ಮಾ ಅವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಪೊಲೀಸರಿಗೆ ನೀಡಲಾಗಿರುವ ವರದಿಯಲ್ಲಿ ಆಕೆಯು ಗರ್ಭಿಣಿ ಆಗಿರಲಿಲ್ಲ ಎಂದು ಉಲ್ಲೇಖಿಸಲಾಗಿದೆ. ಕತ್ತಿಗೆ ಬಿಗಿಯಾದ ದಾರ ಅಥವಾ ಬಟ್ಟೆಯ ಬಿಗಿತದಿಂದ ಉಸಿರುಗಟ್ಟಿ ಸತ್ತಿದ್ದಾರೆ ಎಂದು ವರದಿ ಹೇಳಿದೆ. ಡಿ.26ರ ಸಂಜೆ ತುನಿಶಾ ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಿದ್ದಾರೆ.
ಅಂದಹಾಗೆ, 20 ವರ್ಷದ ತುನಿಶಾ ಶರ್ಮಾ ಹಲವು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದರು. ಐತಿಹಾಸಿಕ ಧಾರಾವಾಹಿ 'ಭಾರತ್ ಕಾ ವೀರ್ ಪುತ್ರ-ಮಹಾರಾಣಾ ಪ್ರತಾಪ' ಮೂಲಕ ನಟನೆ ಆರಂಭಿಸಿದ್ದ ಅವರು, 'ಚಕ್ರವರ್ತಿ ಅಶೋಕ್ ಸಾಮ್ರಾಟ್', 'ಗಬ್ಬರ್ ಪೂಂಚವಾಲಾ', 'ಶೀರ್ ಇ ಪಂಜಾಬ್; ಮಹಾರಾಜ ರಂಜಿತ್ ಸಿಂಗ್', 'ಇಂಟರ್ನೆಟ್ ವಾಲಾ ಲವ್', 'ಇಶ್ಕ್ ಸುಬಾನ್ ಅಲ್ಲಾ' ಮುಂತಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ 'ಫಿತೂರ್', 'ಬಾರ್ ಬಾರ್ ದೆಖೋ', 'ಕಹಾನಿ 2; ದುರ್ಗ ರಾಣಿ ಸಿಂಗ್', 'ದಬಂಗ್ 3' ಸಿನಿಮಾಗಳಲ್ಲೂ ತುನಿಶಾ ಬಣ್ಣ ಹಚ್ಚಿದ್ದರು.
Tunisha Sharma Bjp Mla Ram Kadam Claims Love Jihad Angle In Actress Death.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm