ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್ವುಡ್ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm