ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್ವುಡ್ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm