ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.

2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.

ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm