ಬ್ರೇಕಿಂಗ್ ನ್ಯೂಸ್
02-02-23 02:23 pm Source: news18 ಸಿನಿಮಾ
ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಹೊರತುಪಡಿಸಿ ರಾಜ್ ಬಿ. ಶೆಟ್ಟಿ ಅವರು ಭರ್ಜರಿಯಾದ ಸಿನಿಮಾ ಒಂದನ್ನು ರೆಡಿ ಮಾಡುತ್ತಿದ್ದಾರೆ. ರಾಜ್ ಬಿ. ಶೆಟ್ಟಿ ಅವರ ಸಿನಿಮಾ ಕೆರಿಯರ್ನಲ್ಲಿಯೇ ಅವರು ಮಾಡುತ್ತಿರುವಂತಹ ಬಿಗ್ ಬಜೆಟ್ ಸಿನಿಮಾ ಇದಾಗಿದೆ. ಹೌದು. ರಾಜ್ ಬಿ. ಶೆಟ್ಟಿ ಅವರು ದೊಡ್ಡಮಟ್ಟದಲ್ಲಿ ಬಂಡವಾಳವನ್ನು ಹಾಕಿ ಈ ಸಿನಿಮಾ ಮಾಡುತ್ತಿದ್ದಾರೆ.
90% ಶೂಟಿಂಗ್ ಕಂಪ್ಲೀಟ್
ಅದ್ಯಾವಾಗ ಶೂಟಿಂಗ್ ಮಾಡಿದ್ರೋ ಗೊತ್ತಿಲ್ಲ. ಈ ಬಿಗ್ ಬಜೆಟ್ ಸಿನಿಮಾದ ಶೇ.90ರಷ್ಟು ಚಿತ್ರೀಕರಣ ಪೂರ್ತಿಯಾಗಿದೆ. ಉಡುಪಿ, ಮಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಶೂಟಿಂಗ್ ಕೂಡಾ ಮಾಡಲಾಗಿದೆ.

ಲವ್ ಸ್ಟೋರಿ ಅಲ್ಲ, ಆದ್ರೆ ಇಬ್ಬರು ಹೀರೋಯಿನ್ಸ್ ಇದ್ದಾರೆ
ಈ ಚಿತ್ರ ಖಂಡಿತಾ ಲವ್ ಸ್ಟೋರಿ ಸಿನಿಮಾ ಅಲ್ಲ ಎನ್ನುವ ಮಾಹಿತಿ ಸಿಕ್ಕಿದೆ. ರಾಜ್ ಬಿ. ಶೆಟ್ಟಿ ಅವರ ಸಿನಿಮಾ ಲಿಸ್ಟ್ ತೆಗೆದು ನೋಡಿದರೆ ಅವರು ಮಾಡಿರುವ ಸಿನಿಮಾಗಳ ಕಾನ್ಸೆಪ್ಟ್ ನಿಜಕ್ಕೂ ವಿಭಿನ್ನವಾಗಿದೆ. ಹೊಸತನ ಪ್ರಯೋಗ ಮಾಡುವ ರಾಜ್ ಬಿ. ಶೆಟ್ಟಿ ಅವರ ಚಿತ್ರಗಳಲ್ಲಿ ಕಥೆ, ಸಿನಿಮಾದ ರೀತಿ ಎಲ್ಲವೂ ಡಿಫರೆಂಟಾಗಿರುತ್ತದೆ. ವಾಸ್ತವಕ್ಕೆ ಅತ್ಯಂತ ಹತ್ತಿರದಲ್ಲಿ ನಿಂತು ಸೂಕ್ಷ್ಮ ವಿಚಾರವೊಂದನ್ನು ಎಳೆ ಎಳೆಯಾಗಿ ಪ್ರೇಕ್ಷಕರ ಮುಂದೆ ಬಿಚ್ಚಿಡುವುದರಲ್ಲಿ ರಾಜ್ ಬಿ. ಶೆಟ್ಟಿ ನಿಸ್ಸೀಮರು.
ಈಗ ಈ ಸಿನಿಮಾದಲ್ಲಿ ಇಬ್ಬರು ಹೀರೋಯಿನ್ಸ್ ಇದ್ದಾರೆ. ನಟಿ ಸಂಯುಕ್ತಾ ಹೊರನಾಡು ಅವರು ನಟಿಸುತ್ತಿದ್ದು ಅವರೊಂದಿಗೆ ಮತ್ತೊಬ್ಬ ಹೀರೋಯಿನ್ ಕೂಡಾ ಸಾಥ್ ಕೊಡುತ್ತಿದ್ದಾರೆ. ಆದರೆ ಈ ಸಿನಿಮಾ ಲವ್ ಸ್ಟೋರಿ, ಅಥವಾ ರೊಮ್ಯಾಂಟಿಕ್ ಸಿನಿಮಾ ಅಲ್ಲ.
ಕೊನೆಯ ಶೆಡ್ಯೂಲ್ ಚಿತ್ರೀಕರಣ
ಈಗಾಗಲೇ ಹೇಳಿದಂತೆ ಈ ಸಿನಿಮಾದಲ್ಲಿ ಶೇ.90ರಷ್ಟು ಚಿತ್ರೀಕರಣ ಪೂರ್ತಿಗೊಂಡಿದ್ದು ಇನ್ನು ಕೊನೆಯ ಶೆಡ್ಯೂಲ್ ಮಾತ್ರ ಬಾಕಿ ಇದೆ. ಈ ಸಿನಿಮಾದ ಕೊನೆಯ ಶೆಡ್ಯೂಲ್ ಶೂಟಿಂಗ್ ಆರಂಭವಾಗಿದ್ದು ಇನ್ನೊಂದು ವಾರದೊಳಗೆ ಈ ಬಿಗ್ ಬಜೆಟ್ ಸಿನಿಮಾ ಚಿತ್ರೀಕರಣ ಪೂರ್ತಿಯಾಗಲಿದೆ.
ಬಂಡವಾಳ ಹಾಕಿರೋದು ಯಾರು?
ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಮೂಲಕ ಈ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ. ಅಗಸ್ತ್ಯ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.
Raj B Shetty Big Budget movie already completed 90 percent shooting is not a Love story here is the Exclusive Update.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm