ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.


ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm