ಬ್ರೇಕಿಂಗ್ ನ್ಯೂಸ್
10-02-23 01:22 pm Source: news18 ಸಿನಿಮಾ
ಕೋಝಿಕ್ಕೋಡ್ ನಗರ ಪೊಲೀಸ್ ಠಾಣೆಯಲ್ಲಿ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ನ ಖ್ಯಾತ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಕ್ರೈಂ ನಂ.703/2022 ರಲ್ಲಿ ಹೆಸರಿಸಲ್ಪಟ್ಟಿದ್ದಾರೆ. ಕಾಪಿರೈಟ್ ಆ್ಯಕ್ಟ್ 1956ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅನುಮತಿ ಇಲ್ಲದೆ ಕಾಪಿ ಮಾಡಲಾಗಿದೆ
ಅರ್ಜಿದಾರರ ಪ್ರಕಾರ ವರಾಹರೂಪಂ ಹಾಡು ನವರಸಂ ಹಾಡಿನ ಅನಧಿಕೃತ ಕಾಪಿಯಾಗಿದೆ ಎಂದು ಹೇಳಲಾಗಿದೆ. ಮಾತೃಭೂಮಿ ಮುದ್ರಣ ಹಾಗೂ ಪ್ರಸರಣ ಕಂಪೆನಿ ಲಿಮಿಟೆಡ್ನ ಕಪ್ಪ ಟಿವಿಯಲ್ಲಿ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ನವರಸಂ ಹಾಡನ್ನು ಪರ್ಫಾರ್ಮ್ ಮಾಡಿದ್ದರು. ಆದರೆ ವರಾಹ ರೂಪಂ ಹಾಡಿನ ತಂಡ ಇದು ಒಂದು ಸ್ವತಂತ್ರ ರಚನೆಯಾಗಿದ್ದು ಯಾವುದನ್ನೂ ಕಾಪಿ ಮಾಡಿಲ್ಲ ಎಂದು ಹೇಳಿತ್ತು. ಆದರೆ ವಿವಾದ ಇನ್ನೂ ಕೊನೆಯಾಗಿಲ್ಲ.

ಇದು ಕಾಪಿ ಅಲ್ಲ, ಸ್ಫೂರ್ತಿ ಎಂದಿದ್ದ ಕಾಂತಾರ ತಂಡ
‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ‘ವರಾಹ ರೂಪಂ..’ ಮತ್ತು ‘ನವರಸಂ..’ ಹಾಡಿನ ನಡುವೆ ಇರುವ ಸಾಮ್ಯತೆ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಆದರೆ ‘ಇದು ಕಾಪಿ ಅಲ್ಲ, ಕೇವಲ ಸ್ಫೂರ್ತಿ ಪಡೆದು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ’ ಎಂದು ಅಜನೀಶ್ ಬಿ. ಲೋಕನಾಥ್ ಅವರು ಸಮಜಾಯಿಷಿ ನೀಡಿದ್ದರು.

ಮ್ಯೂಸಿಕ್ ಆ್ಯಪ್ಗಳಿಂದ ಡಿಲೀಟ್ ಮಾಡಿದ್ದ ಹಾಡು
ಮ್ಯೂಸಿಕ್ ಆ್ಯಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಕಾಪಿ ರೈಟ್ ಎನ್ನುವುದು ಸೂಕ್ಷ್ಮ ಸಂಗತಿ. ಹಾಡು, ಕಂಟೆಂಟ್ಗಳು ಕಾಪಿ ಆದಾಗ ಅದರ ಬಗ್ಗೆ ಎಚ್ಚರಿಕೆಯನ್ನೂ ನೀಡಲಾಗುತ್ತದೆ. ಹಾಡನ್ನು ಪ್ಲೇ ಮಾಡದಂತೆ ಕೋರ್ಟ್ ಆದೇಶಿಸಿದ ಕೆಲವು ದಿನಗಳ ನಂತರ ಈಗ ಹಾಡನ್ನು ಎಲ್ಲೆಡೆ ಡಿಲೀಟ್ ಮಾಡಲಾಗಿತ್ತು.
ಕೇರಳದ ಸ್ಥಳೀಯ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿ ಹಾಡನ್ನು ಬಳಸದಂತೆ ಕಾಂತಾರ ತಂಡಕ್ಕೆ ಆದೇಶ ಹೊರಡಿಸಿತ್ತು. ಈಗ ಈ ಆದೇಶಕ್ಕೆ ಚಿತ್ರತಂಡ ತಲೆಬಾಗಿದ್ದು ಯೂಟ್ಯೂಬ್, ಮ್ಯೂಸಿಕ್ ಆ್ಯಪ್ಗಳಾದ ಸಾವನ್, ಗಾನ ಮೊದಲಾದ ಪ್ಲಾಟ್ಫಾರ್ಮ್ಗಳಿಂದ ಈ ಸಾಂಗ್ ಡಿಲೀಟ್ ಮಾಡಲಾಗಿತ್ತು.
Kantara makers get Anticipatory Bail told not to Exhibit Song Varaharoopam Song.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm