ಬ್ರೇಕಿಂಗ್ ನ್ಯೂಸ್
14-02-23 02:22 pm Source: news18 ಸಿನಿಮಾ
ಕನ್ನಡ ಸಿನಿಮಾಗಳು ದೂರದ ವಿದೇಶಗಳಲ್ಲೂ ರಿಲೀಸ್ ಆಗುತ್ತಿವೆ. ಕನ್ನಡ ಜನತೆ ಎಲ್ಲಿದ್ದಾರೆ ಅಲ್ಲಿ ಕನ್ನಡ ಸಿನಿಮಾಗಳನ್ನ ತಲುಪಿಸೋ ಕೆಲಸ ಆಗುತ್ತಿದೆ. ಹಾಗೆ ಮುಂದೆ ಬಂದೋರಿಗೆ ಕನ್ನಡ ಸಿನಿಮಾ ನಿರ್ಮಾಪಕರು ಸಪೋರ್ಟ್ ಮಾಡುತ್ತಿದ್ದಾರೆ.
ಕೆನಡಾದಲ್ಲೂ ಈಗ ಕನ್ನಡ ಸಿನಿಮಾ ರಿಲೀಸ್
ಕನ್ನಡ ಸಿನಿಮಾ ಪ್ರೇಮಿಗಳು ದೇಶ-ವಿದೇಶದಲ್ಲಿ ಎಲ್ಲಡೆ ಇದ್ದಾರೆ. ಆದರೆ ಅವರಿಗೆ ಸಿನಿಮಾಗಳು ತಲುಪುತ್ತಿರಲಿಲ್ಲ. ಕೆಜಿಎಫ್ ಚಿತ್ರ ಬಂದ್ಮೇಲೆ ಅದು ಎಲ್ಲರಿಗೂ ತಲುಪಿತು ನೋಡಿ. ಇದಾದ್ಮೇಲೆ ಕನ್ನಡದ ಕಾಂತಾರ ಆ ದಾರಿಯನ್ನ ಇನ್ನಷ್ಟು ವಿಸ್ತಾರ ಮಾಡಿದೆ.

ಕನ್ನಡದ ಸಿನಿಮಾಗಳು ಕೆನಡಾದಲ್ಲಿ ರಿಲೀಸ್ ಆಗೋದು ಕಡಿಮೆ. ಆದರೆ ಈಗ ಅದು ಸಾಧ್ಯವಾಗುತ್ತಿದೆ. ಅಲ್ಲಿಯ ಕನ್ನಡ ಸಿನಿಪ್ರೇಮಿಗಳಿಗೆ ಕನ್ನಡ ಸಿನಿಮಾಗಳು ಸಿಗುತ್ತಿವೆ.
ಆ ಲೆಕ್ಕದಲ್ಲಿ ಡಾಲಿ ಧನಂಜಯ್ ಅಭಿನಯದ ಹೊಯ್ಸಳ ಚಿತ್ರದ ಸಿನಿಮಾ ಕೆನಡಾದಲ್ಲಿ ರಿಲೀಸ್ ಆಗುತ್ತಿದೆ. ಇದೇನೋ ಮೊನ್ನೆಯ ವಿಷಯ ಆಯಿತು. ಆದರೆ ಕನ್ನಡದ ಪ್ಯಾನ್ ಇಂಡಿಯಾ ಕಬ್ಜ ಸಿನಿಮಾ ಕೂಡ ಇದೇ ಕೆನಡಾ ದೇಶದಲ್ಲಿ ರಿಲೀಸ್ ಆಗುತ್ತಿದೆ.
![]()
ಕೆನಡಾದಲ್ಲಿ ಕಬ್ಜ ಸಿನಿಮಾ ಪ್ರೀಮಿಯರ್ ಶೋ
ಕೆನಡಾದಲ್ಲಿ ಕಬ್ಜ ಚಿತ್ರದ ಇನ್ನೂ ಒಂದು ಕೆಲಸ ಆಗುತ್ತಿದೆ. ಮಾರ್ಚ್-17 ರಂದು ರಾಜ್ಯ-ದೇಶ-ವಿದೇಶ ಹೀಗೆ ಎಲ್ಲೆಡೆ ಕಬ್ಜ ಸಿನಿಮಾ ರಿಲೀಸ್ ಆಗುತ್ತದೆ. ಅದಕ್ಕೂ ಮೊದಲೇ ಕಬ್ಜ ಸಿನಿಮಾದ ಒಂದು ವಿಶೇಷ ಶೋ ಕೂಡ ಇದೆ.
ಕೆನಡಾ ದೇಶದ ವಿಲೇಜ್ ಗ್ರೂಪ್ ಈ ಒಂದು ಸಿನಿಮಾವನ್ನ ಇಲ್ಲಿ ಒಂದು ದಿನದ ಮುಂಚೇನೆ ರಿಲೀಸ್ ಮಾಡುತ್ತಿದೆ. ಅದನ್ನ ಪ್ರೀಮಿಯರ್ ಶೋ ಅಂತಲೇ ಈಗಾಗಲೇ ಸುದ್ದಿ ಮಾಡಲಾಗುತ್ತಿದೆ.

ಕೆನಡಾದಲ್ಲಿ ಒಂದು ದಿನ ಮುಂಚೇನೆ ಕಬ್ಜ ರಿಲೀಸ್
ಕೆನಡಾ ದೇಶದಲ್ಲಿ ಕಬ್ಜ ಸಿನಿಮಾವನ್ನ ಇಲ್ಲಿಯ ಜನ ಒಂದು ದಿನ ಮುಂಚೆ ಅಂದ್ರೆ, ಮಾರ್ಚ್-16 ರಂದು ನೋಡಬಹುದಾಗಿದೆ. ಈಗಾಗಲೇ ಈ ಬಗ್ಗೆ ಮಾಹಿತಿ ಕೂಡ ಹೊರ ಬಂದಿದೆ.
ಸೋಷಿಯಲ್ ಮೀಡಿಯಾದಲ್ಲೂ ಈ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಸಿನಿಮಾ ಪ್ರೇಮಿಗಳು ಒಂದು ದಿನದ ಮುಂಚೇನೆ ಕನ್ನಡದ ಕಬ್ಜ ಚಿತ್ರದ ಎಂಜಾಯ್ ಮಾಡಬಹುದಾಗಿದೆ.
![]()
ಕನ್ನಡದ ಪ್ಯಾನ್ ಇಂಡಿಯಾ ಕಬ್ಜ ಸಿನಿಮಾ
ನಿರ್ದೇಶಕ, ನಿರ್ಮಾಪಕ ಆರ್.ಚಂದ್ರು ತಮ್ಮ ಈ ಚಿತ್ರವನ್ನ ದೊಡ್ಡ ಮಟ್ಟದಲ್ಲಿಯೇ ರಿಲೀಸ್ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ಈ ವರ್ಷ ಕನ್ನಡದಲ್ಲಿ ಈ ಒಂದೇ ಒಂದು ಸಿನಿಮಾ ಇದೆ. ಹಾಗಾಗಿಯೇ ಈ ಚಿತ್ರದ ಬಗ್ಗೆ ತುಂಬಾನೇ ನಿರೀಕ್ಷೆ ಇದೆ.
ದಿನೇ ದಿನೇ ಚಿತ್ರದ ಹೊಸ ಹೊಸ ಸುದ್ದಿಗಳು ಹೊರ ಬೀಳುತ್ತಿವೆ. ಸಿನಿಮಾ ಪ್ರೇಮಿಗಳಲ್ಲೂ ರಿಯಲ್ ಸ್ಟಾರ್, ಕಿಚ್ಚ ಸುದೀಪ್ ಚಿತ್ರ ಪ್ರೇಮಿಗಳಿಗೂ ಸಿನಿಮಾ ಬಗ್ಗೆ ಇನ್ನಿಲ್ಲದಂತೆ ಕುತೂಹಲ ಮೂಡಿದೆ.
Kannada Movie Kabzaa Premiere show in Canada on March16.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm